ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಂವಿಧಾನದ ಮೌಲ್ಯದ ಸುತ್ತ ಚಿತ್ರೀಕರಿಸಿರುವ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಸಿನಿಮಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದರು.
ನಾನೂ ಸಿನಿಮಾ ನೋಡ್ತೀನಿ ಎಂದು ದುನಿಯಾ ವಿಜಯ್ ಅವರಿಗೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ ಪ್ರತಿಯೊಬ್ಬರೂ ಸಿನಿಮಾ ವೀಕ್ಷಿಸುವಂತೆ ಕರೆ ನೀಡಿದರು.




