KRS releases water to canals
ಬೆಂಗಳೂರು: ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಆಘಾತಕಾರಿ ವರದಿಯನ್ನು ಬಹಿರಂಗಗೊಳಿಸಿದೆ.
12 ನದಿಗಳ ನೀರನ್ನು 32 ಕಡೆ ಪರಿಶೀಲನೆ ನಡೆಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನದಿಗಳ ನೀರಿನಲ್ಲಿ ಆಮ್ಲಜನಕ ಕೊರತೆ ಇದೆ ಎಂದು ವರದಿ ನೀಡಿದೆ.
ಇನ್ನು ಪರೀಕ್ಷೆಗೆ ಒಳಪಟ್ಟ 12 ನದಿಗಳಲ್ಲಿ ಒಂದೇ ಒಂದು ನದಿಗೂ ಎ ದರ್ಜೆ ಸಿಕ್ಕಿಲ್ಲ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ನದಿಗಳ ನೀರಿನ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಜೀವನದಿ ಕಾವೇರಿ ಸೇರಿದಂತೆ ಪ್ರಮುಖ ನದಿಗಳ ನೀರಿನಲ್ಲಿ ಆಮ್ಲಜನಕ ಕೊರತೆಯಿದೆ. ನದಿಗಳ ನೀರು ಕಲುಷಿತವಾಗಿದೆ. 12 ನದಿಗಳ ಪೈಕಿ ನೇತ್ರಾವತಿ ನದಿಗೆ ಮಾತ್ರ ಬಿ ದರ್ಜೆ ಸಿಕ್ಕಿದೆ. ಇದನ್ನು ಸ್ನಾನ ಹಾಗೂ ಗೃಹಬಳಕೆಗೆ ಉಪಯೋಗಿಸಬಹುದಾಗಿದೆ.
ಲಕ್ಷ್ಮಣತೀರ್ಥ, ತುಂಗಭದ್ರಾ, ಕಾವೇರಿ, ಕಬಿನಿ, ಶಿಂಷಾ, ಕೃಷ್ಣಾ ನದಿಗೆ ಸಿ ದರ್ಜೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ನೀಡಿದೆ. ಭೀಮಾನದಿ, ಕಾಗಿಣಾ ಹಾಗೂ ಅರ್ಕಾವತಿ ನದಿಗಳಿಗೆ ಡಿ ದರ್ಜೆ ನೀಡಲಾಗಿದೆ.
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…