KRS releases water to canals
ಬೆಂಗಳೂರು: ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಆಘಾತಕಾರಿ ವರದಿಯನ್ನು ಬಹಿರಂಗಗೊಳಿಸಿದೆ.
12 ನದಿಗಳ ನೀರನ್ನು 32 ಕಡೆ ಪರಿಶೀಲನೆ ನಡೆಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನದಿಗಳ ನೀರಿನಲ್ಲಿ ಆಮ್ಲಜನಕ ಕೊರತೆ ಇದೆ ಎಂದು ವರದಿ ನೀಡಿದೆ.
ಇನ್ನು ಪರೀಕ್ಷೆಗೆ ಒಳಪಟ್ಟ 12 ನದಿಗಳಲ್ಲಿ ಒಂದೇ ಒಂದು ನದಿಗೂ ಎ ದರ್ಜೆ ಸಿಕ್ಕಿಲ್ಲ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ನದಿಗಳ ನೀರಿನ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಜೀವನದಿ ಕಾವೇರಿ ಸೇರಿದಂತೆ ಪ್ರಮುಖ ನದಿಗಳ ನೀರಿನಲ್ಲಿ ಆಮ್ಲಜನಕ ಕೊರತೆಯಿದೆ. ನದಿಗಳ ನೀರು ಕಲುಷಿತವಾಗಿದೆ. 12 ನದಿಗಳ ಪೈಕಿ ನೇತ್ರಾವತಿ ನದಿಗೆ ಮಾತ್ರ ಬಿ ದರ್ಜೆ ಸಿಕ್ಕಿದೆ. ಇದನ್ನು ಸ್ನಾನ ಹಾಗೂ ಗೃಹಬಳಕೆಗೆ ಉಪಯೋಗಿಸಬಹುದಾಗಿದೆ.
ಲಕ್ಷ್ಮಣತೀರ್ಥ, ತುಂಗಭದ್ರಾ, ಕಾವೇರಿ, ಕಬಿನಿ, ಶಿಂಷಾ, ಕೃಷ್ಣಾ ನದಿಗೆ ಸಿ ದರ್ಜೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ನೀಡಿದೆ. ಭೀಮಾನದಿ, ಕಾಗಿಣಾ ಹಾಗೂ ಅರ್ಕಾವತಿ ನದಿಗಳಿಗೆ ಡಿ ದರ್ಜೆ ನೀಡಲಾಗಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…