ಬೆಂಗಳೂರು: ನಗರದಲ್ಲಿ ನೀರಿನ ದರ ಏರಿಕೆ ಆನಿವಾರ್ಯವಾಗಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರು ಸರಿ ದರ ಹೆಚ್ಚಳವಾಗುತ್ತದೆ. ಎಷ್ಟು ಏರಿಕೆ ಮಾಡಬೇಕೆಂದು ಇನ್ನೂ ನಿರ್ಧರಿಸಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಇಂದು(ಆ.22) ಯುನೈಟೆಡ್ ನೇಷನ್ಸ್ ಇನೋವೇಷನ್ಸ್ ಪ್ರಾಜೆಕ್ಟ್ ಫಾರ್ ವಾಟರ್ ಸೆಕ್ಯೂರಿಟಿ ಇನ್ ಬೆಂಗಳೂರು ಯೋಜನೆ ಹಾಗೂ ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮ ಮತ್ತು 110 ಹಳ್ಳಿಗಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಂಗಳೂರಿನ 1.40ಕೋಟಿ ಜನರಿಗೆ ನೀರನ್ನು ಒದಗಿಸಲೇಬೇಕು. ಇದಕ್ಕಾಗಿ ಸಾಲ ಮಾಡಿ ಸಂಪರ್ಕ ಜಾಲವನ್ನು ಹೆಚ್ಚಿಸದೆ ಹೊರತು ನೀರು ಪೂರೈಕೆ ಕಷ್ಟವಾಗುತ್ತದೆ. ದರ ಹೆಚ್ಚಿಸದಿದ್ದರೆ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ. ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ ಎಂದು ತಿಳಿಸಿದರು.
ನೀರು ಮತ್ತು ಇಂಧನ ಈ ಎರಡು ಪ್ರಮುಖವಾದ ಇಲಾಖೆಗಳು. ಎರಡು ಇಲಾಖೆಯನ್ನು ನಾನು ನೋಡ್ತಾ ಇದ್ದೇನೆ. ಹಿಂದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜನ್ನು ಖಾಸಗೀಕರಣ ಮಾಡುವ ಚರ್ಚೆ ನಡೆದಿತ್ತು. ಅದರ ಬಗ್ಗೆ ಫ್ರಾನ್ಸ್ ಹೋಗಿ ನೋಡಿಕೊಂಡು ಬಂದೆ. ನೋಡಿ ಬಂದು ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗುತ್ತೆ ಎಂದು ಮಾಹಿತಿ ನೀಡಿದೆ. ಸಾಕಷ್ಟು ವಿರೋಧ ವ್ಯಕ್ತವಾಯ್ತು ಆನಂತರ ಕೈ ಬಿಟ್ಟೆವು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ನೀರಿನ ಬಳಕೆಯೂ ಹೆಚ್ಚಾಗಿದೆ. ಮೇಕೆದಾಟು ಯೋಜನೆ ಬಗ್ಗೆ ನನಗೆ ಭರವಸೆ ಇದೆ. ಆದಷ್ಟು ಬೇಗ ಅದನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.
ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಲೋ ಮೀಟರ್ ಯಾರು ಬೋರ್ ವೆಲ್ ಹಾಕುವಂತಿಲ್ಲ. ಯಾರು ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ಹೊಸ ಕಾನೂನು ಬಂದಿದೆ. ರಾಜ್ಯಪಾಲರು ಇದಕ್ಕೆ ಸಹಿ ಹಾಕಿದ್ದಾರೆ. ಬೆಂಗಳೂರಿನ ಜನರಿಗೆ ನೀರು ಪೂರೈಸಲು ನಾವು ಬದ್ಧರಾಗಿದ್ದು, ಅದಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…