ರಾಜ್ಯ

ಬೆಂಗಳೂರಲ್ಲಿ ನೀರನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ನೀರಿನ ದರ ಏರಿಕೆ ಆನಿವಾರ್ಯವಾಗಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರು ಸರಿ ದರ ಹೆಚ್ಚಳವಾಗುತ್ತದೆ. ಎಷ್ಟು ಏರಿಕೆ ಮಾಡಬೇಕೆಂದು ಇನ್ನೂ ನಿರ್ಧರಿಸಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಇಂದು(ಆ.22) ಯುನೈಟೆಡ್ ನೇಷನ್ಸ್ ಇನೋವೇಷನ್ಸ್ ಪ್ರಾಜೆಕ್ಟ್‌ ಫಾ‌ರ್ ವಾಟ‌ರ್ ಸೆಕ್ಯೂರಿಟಿ ಇನ್ ಬೆಂಗಳೂರು ಯೋಜನೆ ಹಾಗೂ ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮ ಮತ್ತು 110 ಹಳ್ಳಿಗಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರಿನ 1.40ಕೋಟಿ ಜನರಿಗೆ ನೀರನ್ನು ಒದಗಿಸಲೇಬೇಕು. ಇದಕ್ಕಾಗಿ ಸಾಲ ಮಾಡಿ ಸಂಪರ್ಕ ಜಾಲವನ್ನು ಹೆಚ್ಚಿಸದೆ ಹೊರತು ನೀರು ಪೂರೈಕೆ ಕಷ್ಟವಾಗುತ್ತದೆ. ದರ ಹೆಚ್ಚಿಸದಿದ್ದರೆ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ. ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್‌ ಬಿಲ್‌ ಕಟ್ಟಲು ಆಗುತ್ತಿಲ್ಲ ಎಂದು ತಿಳಿಸಿದರು.

ನೀರು ಮತ್ತು ಇಂಧನ ಈ ಎರಡು ಪ್ರಮುಖವಾದ ಇಲಾಖೆಗಳು. ಎರಡು ಇಲಾಖೆಯನ್ನು ನಾನು ನೋಡ್ತಾ ಇದ್ದೇನೆ. ಹಿಂದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜನ್ನು ಖಾಸಗೀಕರಣ ಮಾಡುವ ಚರ್ಚೆ ನಡೆದಿತ್ತು. ಅದರ ಬಗ್ಗೆ ಫ್ರಾನ್ಸ್ ಹೋಗಿ ನೋಡಿಕೊಂಡು ಬಂದೆ. ನೋಡಿ ಬಂದು ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗುತ್ತೆ ಎಂದು ಮಾಹಿತಿ ‌ನೀಡಿದೆ. ಸಾಕಷ್ಟು ವಿರೋಧ ವ್ಯಕ್ತವಾಯ್ತು ಆನಂತರ ಕೈ ಬಿಟ್ಟೆವು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ನೀರಿನ ಬಳಕೆಯೂ ಹೆಚ್ಚಾಗಿದೆ. ಮೇಕೆದಾಟು ಯೋಜನೆ ಬಗ್ಗೆ ನನಗೆ ಭರವಸೆ ಇದೆ‌. ಆದಷ್ಟು ಬೇಗ ಅದನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.

ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಲೋ ಮೀಟರ್ ಯಾರು ಬೋರ್ ವೆಲ್ ಹಾಕುವಂತಿಲ್ಲ. ಯಾರು ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ಹೊಸ ಕಾನೂನು ಬಂದಿದೆ. ರಾಜ್ಯಪಾಲರು ಇದಕ್ಕೆ ಸಹಿ ಹಾಕಿದ್ದಾರೆ. ಬೆಂಗಳೂರಿನ ಜನರಿಗೆ ನೀರು ಪೂರೈಸಲು ನಾವು ಬದ್ಧರಾಗಿದ್ದು, ಅದಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

3 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

3 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

3 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

4 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

4 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

5 hours ago