ರಾಜ್ಯ

ಬೆಂಗಳೂರಲ್ಲಿ ನೀರನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ನೀರಿನ ದರ ಏರಿಕೆ ಆನಿವಾರ್ಯವಾಗಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರು ಸರಿ ದರ ಹೆಚ್ಚಳವಾಗುತ್ತದೆ. ಎಷ್ಟು ಏರಿಕೆ ಮಾಡಬೇಕೆಂದು ಇನ್ನೂ ನಿರ್ಧರಿಸಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಇಂದು(ಆ.22) ಯುನೈಟೆಡ್ ನೇಷನ್ಸ್ ಇನೋವೇಷನ್ಸ್ ಪ್ರಾಜೆಕ್ಟ್‌ ಫಾ‌ರ್ ವಾಟ‌ರ್ ಸೆಕ್ಯೂರಿಟಿ ಇನ್ ಬೆಂಗಳೂರು ಯೋಜನೆ ಹಾಗೂ ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮ ಮತ್ತು 110 ಹಳ್ಳಿಗಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರಿನ 1.40ಕೋಟಿ ಜನರಿಗೆ ನೀರನ್ನು ಒದಗಿಸಲೇಬೇಕು. ಇದಕ್ಕಾಗಿ ಸಾಲ ಮಾಡಿ ಸಂಪರ್ಕ ಜಾಲವನ್ನು ಹೆಚ್ಚಿಸದೆ ಹೊರತು ನೀರು ಪೂರೈಕೆ ಕಷ್ಟವಾಗುತ್ತದೆ. ದರ ಹೆಚ್ಚಿಸದಿದ್ದರೆ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ. ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್‌ ಬಿಲ್‌ ಕಟ್ಟಲು ಆಗುತ್ತಿಲ್ಲ ಎಂದು ತಿಳಿಸಿದರು.

ನೀರು ಮತ್ತು ಇಂಧನ ಈ ಎರಡು ಪ್ರಮುಖವಾದ ಇಲಾಖೆಗಳು. ಎರಡು ಇಲಾಖೆಯನ್ನು ನಾನು ನೋಡ್ತಾ ಇದ್ದೇನೆ. ಹಿಂದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜನ್ನು ಖಾಸಗೀಕರಣ ಮಾಡುವ ಚರ್ಚೆ ನಡೆದಿತ್ತು. ಅದರ ಬಗ್ಗೆ ಫ್ರಾನ್ಸ್ ಹೋಗಿ ನೋಡಿಕೊಂಡು ಬಂದೆ. ನೋಡಿ ಬಂದು ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗುತ್ತೆ ಎಂದು ಮಾಹಿತಿ ‌ನೀಡಿದೆ. ಸಾಕಷ್ಟು ವಿರೋಧ ವ್ಯಕ್ತವಾಯ್ತು ಆನಂತರ ಕೈ ಬಿಟ್ಟೆವು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ನೀರಿನ ಬಳಕೆಯೂ ಹೆಚ್ಚಾಗಿದೆ. ಮೇಕೆದಾಟು ಯೋಜನೆ ಬಗ್ಗೆ ನನಗೆ ಭರವಸೆ ಇದೆ‌. ಆದಷ್ಟು ಬೇಗ ಅದನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.

ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಲೋ ಮೀಟರ್ ಯಾರು ಬೋರ್ ವೆಲ್ ಹಾಕುವಂತಿಲ್ಲ. ಯಾರು ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ಹೊಸ ಕಾನೂನು ಬಂದಿದೆ. ರಾಜ್ಯಪಾಲರು ಇದಕ್ಕೆ ಸಹಿ ಹಾಕಿದ್ದಾರೆ. ಬೆಂಗಳೂರಿನ ಜನರಿಗೆ ನೀರು ಪೂರೈಸಲು ನಾವು ಬದ್ಧರಾಗಿದ್ದು, ಅದಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago