Mysore
19
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಎಲ್ಲಾ ದರ ಏರಿಕೆಯಾಗಿದೆ: ಇನ್ನು ಗಾಳಿಯೊಂದಕ್ಕೆ ಟ್ಯಾಕ್ಸ್‌ ಹಾಕಬೇಕಿದೆ ಎಂದ ಸಿ.ಟಿ.ರವಿ

ಚಿಕ್ಕಮಗಳೂರು: ಎಲ್ಲಾ ದರ ಏರಿಕೆಯಾಗಿದೆ. ಗಾಳಿಯೊಂದಕ್ಕೆ ಟ್ಯಾಕ್ಸ್‌ ಹಾಕಿದ್ರೆ ಇವರೆಲ್ಲಾ ಔರಂಗಜೇಬನ ಅಪ್ಪಂದಿರು ಅಂತ ತೋರಿಸೋಕೆ ಬೇರೆ ಏನೂ ಬೇಡ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

ನೀರಿನ ಕಂದಾಯ ಜಾಸ್ತಿ ಮಾಡೇ ಮಾಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಎಲ್ಲಾ ದರ ಏರಿಕೆ ಆಗಿದೆ. ಗಾಳಿ ಏಕೆ ಬಿಟ್ಟಿದ್ದೀರಾ, ಅದನ್ನು ಏರಿಸಿಬಿಡಿ. ಗಾಳಿಯೊಂದಕ್ಕೆ ಟ್ಯಾಕ್ಸ್‌ ಹಾಕಿದ್ರೆ ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿಯವರೇ ಜನವಿರೋಧಿ ಆಡಳಿತಕ್ಕೆ ಆಯಸ್ಸು ಕಮ್ಮಿ. ಮುಂದಿನ ಬಾರಿ ಜನ ಬುದ್ದಿ ಕಲಿಸುವುದಕ್ಕೆ ಈಗಾಗಲೇ ತೀರ್ಮಾನ ಮಾಡಿದ್ದಾರೆ ಎಂದರು.

ಒಂದೆಡೆ ಗ್ಯಾರಂಟಿ ಕೊಟ್ಟು ಮತ್ತೊಂದೆಡೆ ಎಲ್ಲರ ಜೇಬಿಗೂ ಪಿಕ್‌ ಪಾಕೆಟ್‌ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಜನರಿಗೆ 2000ರೂ ಕೊಟ್ಟು 20 ಸಾವಿರ ರೂ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

ಇನ್ನು ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಮುಡಾ ಹಗರಣದ ಬಗ್ಗೆ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಚರ್ಚೆಗೆ ಪ್ರಯತ್ನ ಮಾಡಿದ್ದೇವೆ. ಎಲ್ಲಾ ಗೊತ್ತಿದ್ದ ಸಿಎಂ ಸಿದ್ದರಾಮಯ್ಯ ಅದಕ್ಕೆ ಅವಕಾಶ ನೀಡದೇ ಪಲಾಯನ ಮಾಡಿದರು. ಎಲ್ಲಾ ಸತ್ಯ ಹೊರಬರುತ್ತದೆ ಎಂದು ನಮಗೆ ಚರ್ಚೆಗೆ ಅವಕಾಶ ನೀಡಲಿಲ್ಲ ಎಂದು ಕಿಡಿಕಾರಿದರು.

Tags:
error: Content is protected !!