ರಾಜ್ಯ

ಜಲಾನಯನ ಅಭಿವೃದ್ಧಿ | ಹೆಚ್ಚುವರಿ ಹಣ ಬಿಡುಗಡೆಗೆ ಕೇಂದ್ರ ಸಮ್ಮತಿ

ಬೆಂಗಳೂರು: ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ತೋರಿರುವ ಅಭೂತ ಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲೇ 8 ಹೊಸ ಯೋಜನೆಗಳಿಗೆ ಹೆಚ್ಚುವರಿ ರೂ.99 ಕೋಟಿಗಳು ಬಿಡುಗಡೆಗೆ ಮಂಜೂರಾತಿ ನೀಡಿದೆ.

ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಅವರಿಗೆ ಈ ಬಗ್ಗೆ ಲಿಖಿತ ಪತ್ರ ಬರೆದಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ, ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ ಸಿಂಗ್ ಚೌವ್ಹಾಣ್, ಜಲಾನಯನ ಯೋಜನೆ 2.0 ಅಡಿಯಲ್ಲಿ ಹೊಸದಾಗಿ 39,413 ಹೆಕ್ಟೇರ್ನಲ್ಲಿ ಜಲಾನಯನ ಅಭಿವೃದ್ಧಿಗಾಗಿ ಮಂಜೂರಾಗಿ ನೀಡಿರುವುದಾಗಿ ತಿಳಿಸಿದ್ದಾರೆ.

ಕೇಂದ್ರದ ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಭೂ ಸಂಪನ್ಮೂಲ ಸಚಿವಾಲಯದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದು 2021-22 ರಿಂದ 2025-26ರವರೆಗೆ ಇದನ್ನು ಜಾರಿಗೊಳಿಸಲಾಗಿದೆ.

ದೇಶದಾದ್ಯಂತ ಈ ಯೋಜನೆಯಡಿ ಮಳೆಯಾಶ್ರಿತ ಭೂಮಿಯಲ್ಲಿ 50.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿಗಾಗಿ 1150 ಯೋಜನೆಗಳ ಅನುಷ್ಠಾನಕ್ಕೆ ರೂ.12303.33 ಕೋಟಿಗಳನ್ನು ಈಗಾಗಲೇ ಮಂಜೂರು ಮಾಡಿದೆ. ಇದರಲ್ಲಿ ಕರ್ನಾಟಕ ರಾಜ್ಯದ 2.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 63 ಜಲಾನಯನ ಅಭಿವೃದ್ಧಿ ಯೋಜನೆಗಳಿಗೆ ರೂ.679.61 ಕೋಟಿಗಳ ಮಂಜೂರಾತಿ ನೀಡಲಾಗಿದ್ದು ಇದರಲ್ಲಿ ಕೇಂದ್ರದ ಪಾಲಿನ ರೂ.348.79 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಈಗ ಮತ್ತೆ ಹೆಚ್ಚುವರಿ ಭೂ ಪ್ರದೇಶಕ್ಕೆ ರೂ.99 ಕೋಟಿಗಳ ಅನುದಾನದ ಮಂಜೂರಾತಿ ನೀಡಿರುವುದಾಗಿ ಸಚಿವರಾದ ಶಿವರಾಜ ಸಿಂಗ್ ಚೌಹಾಣ್ ರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಯೋಜನೆಗಳ ಯಶಸ್ವಿ ಹಾಗೂ ಕಾಲಮಿತಿಯೊಳಗಿನ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರವು ಅಗತ್ಯವೆಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

12 mins ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

21 mins ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

46 mins ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

51 mins ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

2 hours ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

3 hours ago