ಬೆಂಗಳೂರು: ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ತೋರಿರುವ ಅಭೂತ ಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲೇ 8 ಹೊಸ ಯೋಜನೆಗಳಿಗೆ ಹೆಚ್ಚುವರಿ ರೂ.99 ಕೋಟಿಗಳು ಬಿಡುಗಡೆಗೆ ಮಂಜೂರಾತಿ ನೀಡಿದೆ.
ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಅವರಿಗೆ ಈ ಬಗ್ಗೆ ಲಿಖಿತ ಪತ್ರ ಬರೆದಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ, ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ ಸಿಂಗ್ ಚೌವ್ಹಾಣ್, ಜಲಾನಯನ ಯೋಜನೆ 2.0 ಅಡಿಯಲ್ಲಿ ಹೊಸದಾಗಿ 39,413 ಹೆಕ್ಟೇರ್ನಲ್ಲಿ ಜಲಾನಯನ ಅಭಿವೃದ್ಧಿಗಾಗಿ ಮಂಜೂರಾಗಿ ನೀಡಿರುವುದಾಗಿ ತಿಳಿಸಿದ್ದಾರೆ.
ಕೇಂದ್ರದ ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಭೂ ಸಂಪನ್ಮೂಲ ಸಚಿವಾಲಯದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದು 2021-22 ರಿಂದ 2025-26ರವರೆಗೆ ಇದನ್ನು ಜಾರಿಗೊಳಿಸಲಾಗಿದೆ.
ದೇಶದಾದ್ಯಂತ ಈ ಯೋಜನೆಯಡಿ ಮಳೆಯಾಶ್ರಿತ ಭೂಮಿಯಲ್ಲಿ 50.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿಗಾಗಿ 1150 ಯೋಜನೆಗಳ ಅನುಷ್ಠಾನಕ್ಕೆ ರೂ.12303.33 ಕೋಟಿಗಳನ್ನು ಈಗಾಗಲೇ ಮಂಜೂರು ಮಾಡಿದೆ. ಇದರಲ್ಲಿ ಕರ್ನಾಟಕ ರಾಜ್ಯದ 2.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 63 ಜಲಾನಯನ ಅಭಿವೃದ್ಧಿ ಯೋಜನೆಗಳಿಗೆ ರೂ.679.61 ಕೋಟಿಗಳ ಮಂಜೂರಾತಿ ನೀಡಲಾಗಿದ್ದು ಇದರಲ್ಲಿ ಕೇಂದ್ರದ ಪಾಲಿನ ರೂ.348.79 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಈಗ ಮತ್ತೆ ಹೆಚ್ಚುವರಿ ಭೂ ಪ್ರದೇಶಕ್ಕೆ ರೂ.99 ಕೋಟಿಗಳ ಅನುದಾನದ ಮಂಜೂರಾತಿ ನೀಡಿರುವುದಾಗಿ ಸಚಿವರಾದ ಶಿವರಾಜ ಸಿಂಗ್ ಚೌಹಾಣ್ ರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಯೋಜನೆಗಳ ಯಶಸ್ವಿ ಹಾಗೂ ಕಾಲಮಿತಿಯೊಳಗಿನ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರವು ಅಗತ್ಯವೆಂದು ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…