ರಾಜ್ಯ

ಜಲಾನಯನ ಅಭಿವೃದ್ಧಿ | ಹೆಚ್ಚುವರಿ ಹಣ ಬಿಡುಗಡೆಗೆ ಕೇಂದ್ರ ಸಮ್ಮತಿ

ಬೆಂಗಳೂರು: ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ತೋರಿರುವ ಅಭೂತ ಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲೇ 8 ಹೊಸ ಯೋಜನೆಗಳಿಗೆ ಹೆಚ್ಚುವರಿ ರೂ.99 ಕೋಟಿಗಳು ಬಿಡುಗಡೆಗೆ ಮಂಜೂರಾತಿ ನೀಡಿದೆ.

ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಅವರಿಗೆ ಈ ಬಗ್ಗೆ ಲಿಖಿತ ಪತ್ರ ಬರೆದಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ, ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ ಸಿಂಗ್ ಚೌವ್ಹಾಣ್, ಜಲಾನಯನ ಯೋಜನೆ 2.0 ಅಡಿಯಲ್ಲಿ ಹೊಸದಾಗಿ 39,413 ಹೆಕ್ಟೇರ್ನಲ್ಲಿ ಜಲಾನಯನ ಅಭಿವೃದ್ಧಿಗಾಗಿ ಮಂಜೂರಾಗಿ ನೀಡಿರುವುದಾಗಿ ತಿಳಿಸಿದ್ದಾರೆ.

ಕೇಂದ್ರದ ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಭೂ ಸಂಪನ್ಮೂಲ ಸಚಿವಾಲಯದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದು 2021-22 ರಿಂದ 2025-26ರವರೆಗೆ ಇದನ್ನು ಜಾರಿಗೊಳಿಸಲಾಗಿದೆ.

ದೇಶದಾದ್ಯಂತ ಈ ಯೋಜನೆಯಡಿ ಮಳೆಯಾಶ್ರಿತ ಭೂಮಿಯಲ್ಲಿ 50.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿಗಾಗಿ 1150 ಯೋಜನೆಗಳ ಅನುಷ್ಠಾನಕ್ಕೆ ರೂ.12303.33 ಕೋಟಿಗಳನ್ನು ಈಗಾಗಲೇ ಮಂಜೂರು ಮಾಡಿದೆ. ಇದರಲ್ಲಿ ಕರ್ನಾಟಕ ರಾಜ್ಯದ 2.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 63 ಜಲಾನಯನ ಅಭಿವೃದ್ಧಿ ಯೋಜನೆಗಳಿಗೆ ರೂ.679.61 ಕೋಟಿಗಳ ಮಂಜೂರಾತಿ ನೀಡಲಾಗಿದ್ದು ಇದರಲ್ಲಿ ಕೇಂದ್ರದ ಪಾಲಿನ ರೂ.348.79 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಈಗ ಮತ್ತೆ ಹೆಚ್ಚುವರಿ ಭೂ ಪ್ರದೇಶಕ್ಕೆ ರೂ.99 ಕೋಟಿಗಳ ಅನುದಾನದ ಮಂಜೂರಾತಿ ನೀಡಿರುವುದಾಗಿ ಸಚಿವರಾದ ಶಿವರಾಜ ಸಿಂಗ್ ಚೌಹಾಣ್ ರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಯೋಜನೆಗಳ ಯಶಸ್ವಿ ಹಾಗೂ ಕಾಲಮಿತಿಯೊಳಗಿನ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರವು ಅಗತ್ಯವೆಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

8 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

14 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

20 mins ago