Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ವಯನಾಡು ಭೂ ಕುಸಿತ ದುರಂತದಲ್ಲಿ 200 ದಾಟಿದ ಸಾವಿನ ಸಂಖ್ಯೆ

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಉಳಿದಿರುವವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಆರಂಭಿಸಿವೆ.

ಭಾರತೀಯ ಸೇನೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್‌ ಸಿಬ್ಬಂದಿ ಭೂಕುಸಿತದಿಂದ ಬದುಕುಳಿದವರಿಗಾಗಿ ಕುಸಿದ ಮೇಲ್ಛಾವಣಿ ಮತ್ತು ಅವಶೇಷಗಳಡಿಯಲ್ಲಿ ಹುಡುಕುತ್ತಿದ್ದಾರೆ.

ಭೂಕುಸಿತದಿಂದ ನೆಲಸಮವಾದ ಮುಂಡಕ್ಕೈ ಕುಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮನೆಗಳ ಒಳಗೆ ಕುಳಿತಿರುವ ಮತ್ತು ಮಲಗಿರುವ ಸ್ಥಿತಿಯಲ್ಲಿ ಮೃತದೇಹಗಳ ಭಯಾನಕ ದೃಶ್ಯ ಕಂಡುಬರುತ್ತಿವೆ.

ಅವಶೇಷಗಳಡಿ ಇನ್ನೂ ಹಲವಾರು ಜನರು ಸಿಲುಕಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚಾಗುವ ಆತಂಕವಿದೆ.

ಬಹುತೇಕ ಎಲ್ಲರು ನಿದ್ದೆ ಮಾಡುತ್ತಿರುವಾಗ ಮಧ್ಯರಾತ್ರಿ 1.30 ರಿಂದ 4 ಗಂಟೆಯ ನಡುವೆ ಭೂಕುಸಿತ ಸಂಭವಿಸಿದ್ದು, ಬೃಹತ್‌ ಬಂಡೆಗಳು ಮತ್ತು ಬೇರು ಸಹಿತ ಮರಗಳು ಮುಂಡಕ್ಕೈನಿಂದ ಚೂರಲ್ಮಲಾಗೆ ನುಗ್ಗಿ ತೀವ್ರ ಹಾನಿಯನ್ನುಂಟುಮಾಡಿವೆ.

ಈ ದುರಂತವು 2018ರ ಪ್ರವಾಹದ ನಂತರ ಕೇರಳದಲ್ಲಿ ಸಂಭವಿಸಿದ ಅತ್ಯಂತ ವಿನಾಶಕಾರಿ ಘಟನೆಯಾಗಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ.

Tags: