ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.
ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಉಳಿದಿರುವವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಆರಂಭಿಸಿವೆ.
ಭಾರತೀಯ ಸೇನೆ, ನೌಕಾಪಡೆ ಮತ್ತು ಎನ್ಡಿಆರ್ಎಫ್ ಸಿಬ್ಬಂದಿ ಭೂಕುಸಿತದಿಂದ ಬದುಕುಳಿದವರಿಗಾಗಿ ಕುಸಿದ ಮೇಲ್ಛಾವಣಿ ಮತ್ತು ಅವಶೇಷಗಳಡಿಯಲ್ಲಿ ಹುಡುಕುತ್ತಿದ್ದಾರೆ.
ಭೂಕುಸಿತದಿಂದ ನೆಲಸಮವಾದ ಮುಂಡಕ್ಕೈ ಕುಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮನೆಗಳ ಒಳಗೆ ಕುಳಿತಿರುವ ಮತ್ತು ಮಲಗಿರುವ ಸ್ಥಿತಿಯಲ್ಲಿ ಮೃತದೇಹಗಳ ಭಯಾನಕ ದೃಶ್ಯ ಕಂಡುಬರುತ್ತಿವೆ.
ಅವಶೇಷಗಳಡಿ ಇನ್ನೂ ಹಲವಾರು ಜನರು ಸಿಲುಕಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚಾಗುವ ಆತಂಕವಿದೆ.
ಬಹುತೇಕ ಎಲ್ಲರು ನಿದ್ದೆ ಮಾಡುತ್ತಿರುವಾಗ ಮಧ್ಯರಾತ್ರಿ 1.30 ರಿಂದ 4 ಗಂಟೆಯ ನಡುವೆ ಭೂಕುಸಿತ ಸಂಭವಿಸಿದ್ದು, ಬೃಹತ್ ಬಂಡೆಗಳು ಮತ್ತು ಬೇರು ಸಹಿತ ಮರಗಳು ಮುಂಡಕ್ಕೈನಿಂದ ಚೂರಲ್ಮಲಾಗೆ ನುಗ್ಗಿ ತೀವ್ರ ಹಾನಿಯನ್ನುಂಟುಮಾಡಿವೆ.
ಈ ದುರಂತವು 2018ರ ಪ್ರವಾಹದ ನಂತರ ಕೇರಳದಲ್ಲಿ ಸಂಭವಿಸಿದ ಅತ್ಯಂತ ವಿನಾಶಕಾರಿ ಘಟನೆಯಾಗಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ.
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…