ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.
ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಉಳಿದಿರುವವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಆರಂಭಿಸಿವೆ.
ಭಾರತೀಯ ಸೇನೆ, ನೌಕಾಪಡೆ ಮತ್ತು ಎನ್ಡಿಆರ್ಎಫ್ ಸಿಬ್ಬಂದಿ ಭೂಕುಸಿತದಿಂದ ಬದುಕುಳಿದವರಿಗಾಗಿ ಕುಸಿದ ಮೇಲ್ಛಾವಣಿ ಮತ್ತು ಅವಶೇಷಗಳಡಿಯಲ್ಲಿ ಹುಡುಕುತ್ತಿದ್ದಾರೆ.
ಭೂಕುಸಿತದಿಂದ ನೆಲಸಮವಾದ ಮುಂಡಕ್ಕೈ ಕುಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮನೆಗಳ ಒಳಗೆ ಕುಳಿತಿರುವ ಮತ್ತು ಮಲಗಿರುವ ಸ್ಥಿತಿಯಲ್ಲಿ ಮೃತದೇಹಗಳ ಭಯಾನಕ ದೃಶ್ಯ ಕಂಡುಬರುತ್ತಿವೆ.
ಅವಶೇಷಗಳಡಿ ಇನ್ನೂ ಹಲವಾರು ಜನರು ಸಿಲುಕಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚಾಗುವ ಆತಂಕವಿದೆ.
ಬಹುತೇಕ ಎಲ್ಲರು ನಿದ್ದೆ ಮಾಡುತ್ತಿರುವಾಗ ಮಧ್ಯರಾತ್ರಿ 1.30 ರಿಂದ 4 ಗಂಟೆಯ ನಡುವೆ ಭೂಕುಸಿತ ಸಂಭವಿಸಿದ್ದು, ಬೃಹತ್ ಬಂಡೆಗಳು ಮತ್ತು ಬೇರು ಸಹಿತ ಮರಗಳು ಮುಂಡಕ್ಕೈನಿಂದ ಚೂರಲ್ಮಲಾಗೆ ನುಗ್ಗಿ ತೀವ್ರ ಹಾನಿಯನ್ನುಂಟುಮಾಡಿವೆ.
ಈ ದುರಂತವು 2018ರ ಪ್ರವಾಹದ ನಂತರ ಕೇರಳದಲ್ಲಿ ಸಂಭವಿಸಿದ ಅತ್ಯಂತ ವಿನಾಶಕಾರಿ ಘಟನೆಯಾಗಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ.
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…
ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…