ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.
ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಉಳಿದಿರುವವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಆರಂಭಿಸಿವೆ.
ಭಾರತೀಯ ಸೇನೆ, ನೌಕಾಪಡೆ ಮತ್ತು ಎನ್ಡಿಆರ್ಎಫ್ ಸಿಬ್ಬಂದಿ ಭೂಕುಸಿತದಿಂದ ಬದುಕುಳಿದವರಿಗಾಗಿ ಕುಸಿದ ಮೇಲ್ಛಾವಣಿ ಮತ್ತು ಅವಶೇಷಗಳಡಿಯಲ್ಲಿ ಹುಡುಕುತ್ತಿದ್ದಾರೆ.
ಭೂಕುಸಿತದಿಂದ ನೆಲಸಮವಾದ ಮುಂಡಕ್ಕೈ ಕುಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮನೆಗಳ ಒಳಗೆ ಕುಳಿತಿರುವ ಮತ್ತು ಮಲಗಿರುವ ಸ್ಥಿತಿಯಲ್ಲಿ ಮೃತದೇಹಗಳ ಭಯಾನಕ ದೃಶ್ಯ ಕಂಡುಬರುತ್ತಿವೆ.
ಅವಶೇಷಗಳಡಿ ಇನ್ನೂ ಹಲವಾರು ಜನರು ಸಿಲುಕಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚಾಗುವ ಆತಂಕವಿದೆ.
ಬಹುತೇಕ ಎಲ್ಲರು ನಿದ್ದೆ ಮಾಡುತ್ತಿರುವಾಗ ಮಧ್ಯರಾತ್ರಿ 1.30 ರಿಂದ 4 ಗಂಟೆಯ ನಡುವೆ ಭೂಕುಸಿತ ಸಂಭವಿಸಿದ್ದು, ಬೃಹತ್ ಬಂಡೆಗಳು ಮತ್ತು ಬೇರು ಸಹಿತ ಮರಗಳು ಮುಂಡಕ್ಕೈನಿಂದ ಚೂರಲ್ಮಲಾಗೆ ನುಗ್ಗಿ ತೀವ್ರ ಹಾನಿಯನ್ನುಂಟುಮಾಡಿವೆ.
ಈ ದುರಂತವು 2018ರ ಪ್ರವಾಹದ ನಂತರ ಕೇರಳದಲ್ಲಿ ಸಂಭವಿಸಿದ ಅತ್ಯಂತ ವಿನಾಶಕಾರಿ ಘಟನೆಯಾಗಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…