ವಯನಾಡು: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ರಾಹುಲ್ ಗಾಂಧಿ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಗೆಲುವು ಪಡೆಯಲಿದ್ದಾರೇ ಎಂಬುದಕ್ಕೆ ಮತ ಎಣಿಕೆ ತೆರೆ ಎಳೆಯಲಿದೆ.
ಮತ ಎಣಿಕೆ ಆರಂಭಗೊಂಡಿದ್ದು, ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ಅವರು 57 ಸಾವಿರ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಅಭ್ಯರ್ಥಿ ಸತ್ಯನೆ ಮೊಕೇರಿ ಮತ್ತು ಎನ್ಡಿಎ ಅಭ್ಯರ್ಥಿ ನವ್ಯಾ ಹರಿದಾಸ್ ಕಣದಲ್ಲಿದ್ದಾರೆ.
ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಪ್ರಿಯಾಂಕ ಅವರ ಫಲಿತಾಂಶದ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. ಅಂಚೆ ಹಾಗೂ ಸೇವಾ ಮತಗಳ ಎಣಿಕೆ ಕಾರ್ಯ ಮುಗಿದಿದ್ದು, ಇವಿಎಂ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ 3.5 ಲಕ್ಷ ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದರು. ಆದರೆ ರಾಯಬರೇಲಿ ಕ್ಷೇತ್ರದಿಂದಲೂ ಸ್ಪರ್ಧಿಸಿ ಗೆದ್ದಿದ್ದ ರಾಹುಲ್ ಗಾಂಧಿ ಅವರು, ಅಂತಿಮವಾಗಿ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿ ರಾಜೀನಾಮೆ ನೀಡಿದ್ದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…