ವಯನಾಡು: ವಯನಾಡು ಭೂಕುಸಿತ ವಿಷಯ ತಿಳಿದು ಬಹಳ ನೋವಾಯಿತು. ಕೇರಳ ನನಗೆ ಬಹಳ ಪ್ರೀತಿ ನೀಡಿದೆ. ಆದ್ದರಿಂದ ಭೂಕುಸಿತ ಸಂತ್ರಸ್ತರ ಪುನರ್ ವಸತಿಗಾಗಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ ದೇಣಿಗೆ ನೀಡಿದ್ದೇನೆ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.
ವಯನಾಡು ಭೂಕುಸಿತ ದುರಂತದಲ್ಲಿ 350ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ದುರಂತದಲ್ಲಿ ಇನ್ನೂ ಹೆಚ್ಚಿನ ಜನರು ಭೂಮಿಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ದುರಂತದಲ್ಲಿ ಸಂತ್ರಸ್ತರ ಗೋಳು ಹೇಳತೀರದಾಗಿದ್ದು, ಸ್ಟಾರ್ ನಟ-ನಟಿಯರು ಸಂತಸ್ತರಿಗೆ ದೇಣಿಗೆ ನೀಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಮೋಹನ್ ಲಾಲ್, ಸೂರ್ಯ, ಜ್ಯೋತಿಕಾ, ಕಾರ್ತಿಕ್, ವಿಕ್ರಮ್ ಸೇರಿದಂತೆ ಅನೇಕ ಕಲಾವಿದರು ಕೇರಳಕ್ಕೆ ದೇಣಿಗೆ ನೀಡಿದ್ದಾರೆ.
ಈಗ ಸ್ಟಾರ್ ನಟ ಅಲ್ಲು ಅರ್ಜುನ್ ಕೂಡ ಕೇರಳಕ್ಕೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೇರಳ ಸಿಎಂ ಪರಿಹಾರ ನಿಧಿಗೆ ಅಲ್ಲು ಅರ್ಜುನ್ ಹಣ ನೀಡಿದ್ದಾರೆ. ಅಲ್ಲು ಅರ್ಜುನ್ ನೀಡಿರುವ 25 ಲಕ್ಷ ರೂಪಾಯಿ ದೇಣಿಗೆಯಿಂದ ವಿವಿಧ ರೀತಿಯ ಸೌಕರ್ಯಗಳನ್ನು ನೀಡಲು ಸಹಾಯ ಆಗುತ್ತದೆ. ಔಷಧಿ, ಆಹಾರ, ಬಟ್ಟೆ ಮುಂತಾದ ವಸ್ತುಗಳನ್ನು ನೀಡಲು ಈ ಹಣ ತುಂಬಾ ಸಹಕಾರಿಯಾಗಲಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…