ವಯನಾಡು: ವಯನಾಡು ಭೂಕುಸಿತ ವಿಷಯ ತಿಳಿದು ಬಹಳ ನೋವಾಯಿತು. ಕೇರಳ ನನಗೆ ಬಹಳ ಪ್ರೀತಿ ನೀಡಿದೆ. ಆದ್ದರಿಂದ ಭೂಕುಸಿತ ಸಂತ್ರಸ್ತರ ಪುನರ್ ವಸತಿಗಾಗಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ ದೇಣಿಗೆ ನೀಡಿದ್ದೇನೆ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.
ವಯನಾಡು ಭೂಕುಸಿತ ದುರಂತದಲ್ಲಿ 350ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ದುರಂತದಲ್ಲಿ ಇನ್ನೂ ಹೆಚ್ಚಿನ ಜನರು ಭೂಮಿಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ದುರಂತದಲ್ಲಿ ಸಂತ್ರಸ್ತರ ಗೋಳು ಹೇಳತೀರದಾಗಿದ್ದು, ಸ್ಟಾರ್ ನಟ-ನಟಿಯರು ಸಂತಸ್ತರಿಗೆ ದೇಣಿಗೆ ನೀಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಮೋಹನ್ ಲಾಲ್, ಸೂರ್ಯ, ಜ್ಯೋತಿಕಾ, ಕಾರ್ತಿಕ್, ವಿಕ್ರಮ್ ಸೇರಿದಂತೆ ಅನೇಕ ಕಲಾವಿದರು ಕೇರಳಕ್ಕೆ ದೇಣಿಗೆ ನೀಡಿದ್ದಾರೆ.
ಈಗ ಸ್ಟಾರ್ ನಟ ಅಲ್ಲು ಅರ್ಜುನ್ ಕೂಡ ಕೇರಳಕ್ಕೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೇರಳ ಸಿಎಂ ಪರಿಹಾರ ನಿಧಿಗೆ ಅಲ್ಲು ಅರ್ಜುನ್ ಹಣ ನೀಡಿದ್ದಾರೆ. ಅಲ್ಲು ಅರ್ಜುನ್ ನೀಡಿರುವ 25 ಲಕ್ಷ ರೂಪಾಯಿ ದೇಣಿಗೆಯಿಂದ ವಿವಿಧ ರೀತಿಯ ಸೌಕರ್ಯಗಳನ್ನು ನೀಡಲು ಸಹಾಯ ಆಗುತ್ತದೆ. ಔಷಧಿ, ಆಹಾರ, ಬಟ್ಟೆ ಮುಂತಾದ ವಸ್ತುಗಳನ್ನು ನೀಡಲು ಈ ಹಣ ತುಂಬಾ ಸಹಕಾರಿಯಾಗಲಿದೆ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…