ರಾಜ್ಯ

ವಯನಾಡು ಭೂಕುಸಿತ ಪ್ರಕರಣ: ಮೃತರ ಸಂಖ್ಯೆ 300ಕ್ಕೆ ಏರಿಕೆ

ವಯನಾಡು: ದೇವರನಾಡು ಕೇರಳ ಈಗ ಮರಣ ದಿಬ್ಬವಾಗಿದ್ದು, ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.

ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಈವರೆಗೂ 300ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದು, 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಇನ್ನೂ 240 ಮಂದಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ಅವಶೇಷಗಳಡಿ ಸಿಲುಕಿರುವವರ ಪತ್ತೆಗೆ ಸೇನೆ ಹಾಗೂ ಎನ್‌ಡಿಆರ್‌ಎಫ್‌ ತಂಡ ಅವಿರತವಾಗಿ ಶ್ರಮಿಸುತ್ತಿವೆ.

ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಲಾಗಿದ್ದು, ಮಣ್ಣು-ಕಲ್ಲುಗಳನ್ನು ತೆರವು ಮಾಡಲಾಗುತ್ತಿದೆ. ಸ್ಥಳದಲ್ಲಿ ಶ್ವಾನಗಳನ್ನು ಬಳಸಿ ಶೋಧ ಕಾರ್ಯ ನಡೆಯುತ್ತಿದ್ದು, ಜೆಸಿಬಿಯನ್ನು ಸಹ ನದಿಗೂ ಸಹ ಇಳಿಸಲಾಗಿದೆ. ಚಲಿಯಾರ್‌ ನದಿ ಪ್ರತಾಪ ಕೊಂಚ ಕಡಿಮೆಯಾಗಿದ್ದು, ತಾತ್ಕಾಲಿಕ ಸೇತುವೆ ಬಳಕೆಗೆ ಲಭ್ಯವಾಗಿದೆ.

ಈ ಕಾರ್ಯಾಚರಣೆ ಇನ್ನೂ 15 ದಿನಗಳ ಕಾಲ ಮುಂದುವರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಾವಿನ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ.

ಇನ್ನು ದುರಂತ ಸ್ಥಳಕ್ಕೆ ಇಂದು ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿದಂತೆ ಅನೇಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯಲ್ಲಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು ಶವಗಳನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತಿದ್ದು, ಶವಗಳ ಮುಂದೆ ಕುಟುಂಬದವರ ರೋಧನೆ ಹೇಳತೀರದಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

23 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago