ತಿರುವನಂತಪುರಂ: ಈಗಷ್ಟೇ ತಾನೇ ಭೂಕುಸಿತದ ಕರಾಳ ಭೀಕರತೆಯನ್ನು ಅನುಭವಿಸಿದ ವಯನಾಡಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ನಿನ್ನೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಕುಸಿತ ಸಂಭವಿಸಿದ ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋ ಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ ನಿನ್ನೆ ಗುಡುಗು ಸದ್ದು ಕೇಳಿಸಿದೆ ಎನ್ನಲಾಗಿದೆ.
ಹತ್ತಿರದ ಕೋಝಿಕ್ಕೋಡ್ ಮತ್ತು ಫಾಲಕ್ಕಾಡ್ ಜಿಲ್ಲೆಗಳ ಭಾಗಗಳಿಂದ ಇದೇ ರೀತಿಯ ಶಬ್ದಗಳು ಕೇಳಿಬಂದಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಶಬ್ದ ಕೇಳಿ ಅಂಬಲವಾಯಲ್-ಎಡಕಲ್ ಭಾಗದ ಜನರು ಮನೆಯಿಂದ ಹೊರ ಬಂದಿದ್ದು, ಭಯಭೀತರಾಗಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಶಿಬಿರದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿದೆ.
ಶಬ್ಧ ಬಂದ ಕೂಡಲೇ ಹಲವು ಮನೆಯ ಕಿಟಕಿಗಳ ಗಾಜುಗಳು ಒಡೆದು ಹೋಗಿರುವ ಅನುಭವವಾಗಿದೆ. ಭೂಕುಸಿತದ ತೀವ್ರತೆಯನ್ನು ಮೌಲ್ಯಮಾಪನ ಮಾಡಲು ಕೇಂದ್ರದ ತಜ್ಞರ ತಂಡ ಈಗಾಗಲೇ ವಯನಾಡು ಪ್ರದೇಶಕ್ಕೆ ಭೇಟಿ ನೀಡಿದೆ.
ವರದಿ ಬಂದ ಬಳಿಕವಷ್ಟೇ ಇದು ಭೂಕಂಪನವ, ಇಲ್ಲ ಪ್ರಕೃತಿಯ ವಿಸ್ಮಯವೇ ಎಂಬುದು ತಿಳಿದು ಬರಲಿದೆ.
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…
ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…
ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್ಎಸ್ಎಲ್ಸಿ ಪರೀಕ್ಷಾ…
೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…
ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ…
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…