ರಾಜ್ಯ

ಭೂಕುಸಿತದ ಬಗ್ಗೆ ಯಾವುದೇ ರೀತಿಯ ಮುನ್ನೆಚ್ಚರಿಕೆ ನೀಡಿರಲಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್‌

ತಿರುವನಂತಪುರಂ: ವಯನಾಡು ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದರೂ ಕೇರಳ ಕ್ರಮ ಕೈಗೊಂಡಿಲ್ಲ ಎಂಬ ಅಮಿತ್‌ ಶಾ ಹೇಳಿಕೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ತಿರಸ್ಕರಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರದಿಂದ ಭೂಕುಸಿತದ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಬಂದಿರಲಿಲ್ಲ. ಕೇಂದ್ರ ಸಚಿವ ಅಮಿತ್‌ ಶಾ ಹೇಳಿರುವುದು ಶುದ್ಧ ಸುಳ್ಳು. ಈ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಮುಂದಾಗಬೇಕು. ಇದು ಒಬ್ಬೊರನ್ನೊಬ್ಬರು ದೂಷಿಸುವ ಸಮಯವಲ್ಲ. ವಾಸ್ತವಾಂಶ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ದುರಂತ ಪೀಡಿತ ಪ್ರದೇಶಗಳಲ್ಲಿ ಆರೆಜ್‌ ಅಲರ್ಟ್‌ ಘೋಷಿಸಲಾಗಿದೆ. ಕೇಂದ್ರ ಜಲ ಆಯೋಗವು ಜುಲೈ 23- 29ರ ಅವಧಿಯಲ್ಲಿ ಇರುವಂಜಿಪುಳ ಅಥವಾ ಚಾಲಿಯಾರ್‌ನಲ್ಲಿ ಪ್ರವಾಹದ ಎಚ್ಚರಿಕೆಯನ್ನು ನೀಡಲಿಲ್ಲ. ಇವೆಲ್ಲಾ ಸತ್ಯವಾಗಿರುವಾಗ ಅಮಿತ್‌ ಶಾ ಹೇಗೆ ಸಂಸತ್ತಿನಲ್ಲಿ ಅಸತ್ಯವಾದ ಮಾತುಗಳನ್ನು ಹೇಳಿದರು ಎಂದು ವಿಜಯನ್‌ ಪ್ರಶ್ನಿಸಿದ್ದಾರೆ.

ಭೂಕುಸಿತವಾದ ಸ್ಥಳದಲ್ಲಿ ಹಿಂದೆಂದೂ ಆಗದ ಮಳೆ ಸುರಿದಿದೆ. ಈಗ ಒಬ್ಬರನ್ನೊಬ್ಬರು ದೂಷಿಸದೇ ವಿಪತ್ತಿಗೆ ಒಳಗಾದವರನ್ನು ರಕ್ಷಿಸಲು ಸಾಮೂಹಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಸಿಎಂ ವಿಜಯನ್‌ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

8 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

8 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

9 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

9 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

9 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago