ತಿರುವನಂತಪುರಂ: ವಯನಾಡು ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದರೂ ಕೇರಳ ಕ್ರಮ ಕೈಗೊಂಡಿಲ್ಲ ಎಂಬ ಅಮಿತ್ ಶಾ ಹೇಳಿಕೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ತಿರಸ್ಕರಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರದಿಂದ ಭೂಕುಸಿತದ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಬಂದಿರಲಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಹೇಳಿರುವುದು ಶುದ್ಧ ಸುಳ್ಳು. ಈ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಮುಂದಾಗಬೇಕು. ಇದು ಒಬ್ಬೊರನ್ನೊಬ್ಬರು ದೂಷಿಸುವ ಸಮಯವಲ್ಲ. ವಾಸ್ತವಾಂಶ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ದುರಂತ ಪೀಡಿತ ಪ್ರದೇಶಗಳಲ್ಲಿ ಆರೆಜ್ ಅಲರ್ಟ್ ಘೋಷಿಸಲಾಗಿದೆ. ಕೇಂದ್ರ ಜಲ ಆಯೋಗವು ಜುಲೈ 23- 29ರ ಅವಧಿಯಲ್ಲಿ ಇರುವಂಜಿಪುಳ ಅಥವಾ ಚಾಲಿಯಾರ್ನಲ್ಲಿ ಪ್ರವಾಹದ ಎಚ್ಚರಿಕೆಯನ್ನು ನೀಡಲಿಲ್ಲ. ಇವೆಲ್ಲಾ ಸತ್ಯವಾಗಿರುವಾಗ ಅಮಿತ್ ಶಾ ಹೇಗೆ ಸಂಸತ್ತಿನಲ್ಲಿ ಅಸತ್ಯವಾದ ಮಾತುಗಳನ್ನು ಹೇಳಿದರು ಎಂದು ವಿಜಯನ್ ಪ್ರಶ್ನಿಸಿದ್ದಾರೆ.
ಭೂಕುಸಿತವಾದ ಸ್ಥಳದಲ್ಲಿ ಹಿಂದೆಂದೂ ಆಗದ ಮಳೆ ಸುರಿದಿದೆ. ಈಗ ಒಬ್ಬರನ್ನೊಬ್ಬರು ದೂಷಿಸದೇ ವಿಪತ್ತಿಗೆ ಒಳಗಾದವರನ್ನು ರಕ್ಷಿಸಲು ಸಾಮೂಹಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಸಿಎಂ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…