ವಯನಾಡು: ಕೇರಳದ ವಯನಾಡು ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 350ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ 6ನೇ ದಿನಕ್ಕೆ ಕಾಲಿಟ್ಟಿದೆ.
ಮೃತದೇಹಗಳನ್ನು ಹೊರತೆಗೆಯುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಹೆಚ್ಚಿನ ಬಲ ಮತ್ತು ಉಪಕರಣಗಳನ್ನು ನಿಯೋಜಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ದಾಖಲೆಗಳ ಪ್ರಕಾರ ಮುಂಡಕ್ಕೈ ಮತ್ತು ಚೂರಲ್ಮಲಾದಿಂದ 206 ಜನರು ಇನ್ನೂ ಕಾಣೆಯಾಗಿದ್ದಾರೆ. ಇಲ್ಲಿ ಸಾವಿನ ಸಂಖ್ಯೆ ಕೂಡ 250 ದಾಟಿದೆ. ಸುಧಾರಿತ ರಾಡಾರ್ಗಳು, ಡ್ರೋನ್ಗಳು ಹಾಗೂ ಯಂತ್ರೋಪಕರಣಗಳನ್ನು ರಕ್ಷಣಾ ತಂಡ ಬಳಸಿಕೊಂಡು ಕಾರ್ಯಾಚರಣೆ ಮುಂದುವರಿಸಿವೆ.
ವಯನಾಡು, ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಹರಿಯುವ ಚಾಲಿಯಾರ್ ನದಿಯ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಚಾಲಿಯಾರ್ ನದಿಯಲ್ಲಿಯೇ ಇದುವರೆಗೆ 73 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹಗಳು ಸಿಗಲಿವೆ ಎನ್ನಲಾಗಿದೆ.
ದುರಂತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲಾಗಿದ್ದು, ಎನ್ಡಿಆರ್ಎಫ್, ಕೆ-9 ಶ್ವಾನದಳ, ಸೇನೆ, ವಿಶೇಷ ಕಾರ್ಯಾಚರಣೆ ಗುಂಪು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಪಡೆಗಳ ನೂರಾರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…