ವಯನಾಡು: ಕೇರಳದ ವಯನಾಡು ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 350ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ 6ನೇ ದಿನಕ್ಕೆ ಕಾಲಿಟ್ಟಿದೆ.
ಮೃತದೇಹಗಳನ್ನು ಹೊರತೆಗೆಯುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಹೆಚ್ಚಿನ ಬಲ ಮತ್ತು ಉಪಕರಣಗಳನ್ನು ನಿಯೋಜಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ದಾಖಲೆಗಳ ಪ್ರಕಾರ ಮುಂಡಕ್ಕೈ ಮತ್ತು ಚೂರಲ್ಮಲಾದಿಂದ 206 ಜನರು ಇನ್ನೂ ಕಾಣೆಯಾಗಿದ್ದಾರೆ. ಇಲ್ಲಿ ಸಾವಿನ ಸಂಖ್ಯೆ ಕೂಡ 250 ದಾಟಿದೆ. ಸುಧಾರಿತ ರಾಡಾರ್ಗಳು, ಡ್ರೋನ್ಗಳು ಹಾಗೂ ಯಂತ್ರೋಪಕರಣಗಳನ್ನು ರಕ್ಷಣಾ ತಂಡ ಬಳಸಿಕೊಂಡು ಕಾರ್ಯಾಚರಣೆ ಮುಂದುವರಿಸಿವೆ.
ವಯನಾಡು, ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಹರಿಯುವ ಚಾಲಿಯಾರ್ ನದಿಯ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಚಾಲಿಯಾರ್ ನದಿಯಲ್ಲಿಯೇ ಇದುವರೆಗೆ 73 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹಗಳು ಸಿಗಲಿವೆ ಎನ್ನಲಾಗಿದೆ.
ದುರಂತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲಾಗಿದ್ದು, ಎನ್ಡಿಆರ್ಎಫ್, ಕೆ-9 ಶ್ವಾನದಳ, ಸೇನೆ, ವಿಶೇಷ ಕಾರ್ಯಾಚರಣೆ ಗುಂಪು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಪಡೆಗಳ ನೂರಾರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…