ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದ ಹಸುಗಳ ಪೈಕಿ 9 ಹಸುಗಳು ಮನೆಗೆ ವಾಪಸ್ ಬಂದಿವೆ.
ವಯನಾಡಿನಲ್ಲಿ ವಾಸವಿದ್ದ ಚಾಮರಾಜನಗರ ಮೂಲದ ವಿನೋದ್ ಹಾಗೂ ಜಯಶ್ರೀ ಎಂಬುವವರು 20ಕ್ಕೂ ಹೆಚ್ಚು ಹಸುಗಳನ್ನು ಸಾಕಿ ಜೀವನ ನಡೆಸುತ್ತಿದ್ದರು.
ಜುಲೈ.29ರ ಮಧ್ಯರಾತ್ರಿಯಲ್ಲಿ ಸಂಭವಿಸಿದ ಭೂಕುಸಿತದಿಂದ ಕೊಟ್ಟಿಗೆಯಲ್ಲಿದ್ದ ಹಸುಗಳೆಲ್ಲಾ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದವು.
ಈ ವೇಳೆ ವಿನೋದ್ ಹಾಗೂ ಜಯಶ್ರೀ ಬೆಟ್ಟದ ಮೇಲೆ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದರು.
ಇತ್ತ ಹಸುಗಳು ನೀರಿನಲ್ಲಿ ಕೊಚ್ಚಿಕೊಂಡು ಎತ್ತ ಹೋದವು ಎಂಬುದು ತಿಳಿದಿರಲಿಲ್ಲ. ಆದರೆ ಅಚ್ಚರಿ ಎಂಬಂತೆ ವಿನೋದ್ ಅವರ ಮನೆಯ ಪ್ರದೇಶದ ಹತ್ತಿರವಿರುವ ಟೀ ಎಸ್ಟೇಟ್ನಲ್ಲಿ 9 ಹಸುಗಳು ಕಾಣಿಸಿಕೊಂಡಿವೆ. ವಿಷಯ ತಿಳಿದು ಸ್ಥಳಕ್ಕೆ ಹೋದ ವಿನೋದ್ ಇವು ನಮ್ಮ ಹಸುಗಳು ಎಂದು ಖಚಿತಪಡಿಸಿದ್ದಾರೆ.
ಇನ್ನು ಉಳಿದ ಹಸುಗಳು ಎಲ್ಲಿ ಹೋಗಿವೆ ಎಂಬುದು ಗೊತ್ತಾಗಿಲ್ಲ. ಅವು ಕೂಡ ವಾಪಸ್ ಮನೆಗೆ ಬರಬಹುದು ಎಂದು ಕುಟುಂಬ ಸಂತಸದಲ್ಲಿದೆ.
ಇನ್ನು ವಯನಾಡು ದುರಂತದಲ್ಲಿ 350ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…