ರಾಜ್ಯ

ವಯನಾಡು ಭೂಕುಸಿತ ದುರಂತದಲ್ಲಿ ಮಗನನ್ನು ಕಳೆದುಕೊಂಡ ಕೊಡಗಿನ ದಂಪತಿ

ಕೊಡಗು: ವಯನಾಡು ಭೂಕುಸಿತ ದುರಂತದಲ್ಲಿ ಕೊಡಗಿನ ದಂಪತಿಯೋರ್ವರು ಮಗನನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದಾರೆ.

ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದ ಪರಿಣಾಮ ಕಳೆದ ಮೂರು ವಾರಗಳ ಹಿಂದೆ ಕೂಲಿ ಹರಸಿ ದಂಪತಿ ಕೇರಳದ ವಯನಾಡಿಗೆ ಹೋಗಿದ್ದರು. ಜೊತೆಗೆ ಮಗನನ್ನೂ ಸಹ ವಯನಾಡಿಗೆ ಕರೆದುಕೊಂಡು ಹೋಗಿದ್ದರು. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕವಿತಾ ಹಾಗೂ ರವಿ ದಂಪತಿಯ ಪುತ್ರ ರೋಹಿತ್‌ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಮೃತ ರೋಹಿತ್‌ ತಂದೆ ರವಿ ಅವರು, ಘಟನೆ ನಡೆದ ಬಳಿಕ ಪೊಲೀಸ್‌ ಅಧಿಕಾರಿಯೋರ್ವರು ನನ್ನ ಮಗನ ಮೃತದೇಹವನ್ನು ನನಗೆ ತೋರಿಸಿದರು. ಅದನ್ನು ನಾನು ಮುಟ್ಟಿದೆ. ಅದು ತುಂಬಾ ಮೃದುವಾಗಿತ್ತು. ಆದ್ದರಿಂದ ಮೃತದೇಹವನ್ನು ಕೊಡಗಿಗೆ ತರಲು ಸಾಧ್ಯವಾಗದೇ ವಯನಾಡಿನಲ್ಲಿ ಅಂತ್ಯಕ್ರಿಯೆ ನಡೆಸಿದ್ದೇವೆ ಎಂದು ಕಣ್ಣೀರು ಹಾಕಿದ್ದಾರೆ.

ಒಟ್ಟಿನಲ್ಲಿ ವಯನಾಡು ದುರಂತದಿಂದ ಹಲವರು ಈಗ ಸಂಕಷ್ಟದಲ್ಲಿದ್ದು, ಮುಂದೆ ದಿಕ್ಕು ತೋಚದ ರೀತಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರ ಹೇಗೆ ಪರಿಹಾರ ನೀಡುತ್ತೆ ಎಂಬುದನ್ನು ಕಾದು ನೋಡಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

4 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

4 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

4 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

5 hours ago