ವಯನಾಡು: ಭೀಕರ ಭೂಕುಸಿತಕ್ಕೆ ದೇವರನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 350ಕ್ಕೆ ಏರಿಕೆಯಾಗಿದೆ.
5ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ನಡೆಸಿ ವೈದ್ಯರೇ ಸುಸ್ತಾಗಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳ ಚೀರಾಟ ಮುಂದುವರಿದಿದೆ.
ಭೂಕುಸಿತ ಹಾಗೂ ಪ್ರವಾಹಕ್ಕೆ ಛಿದ್ರಗೊಂಡಿರುವ ದೇಹಗಳು ಘಟನೆಯ ಭೀಕರತೆ ಬೆಚ್ಚಿಡುತ್ತಿವೆ.
ಚಲಿಯಾರ್ ನದಿಯಲ್ಲೇ 135ಕ್ಕೂ ಹೆಚ್ಚು ದೇಹಗಳ ಅಂಗಾಂಗಳು ಪತ್ತೆಯಾಗಿವೆ. ಯಾರ ದೇಹ ಯಾರದ್ದು ಅನ್ನೋದೇ ತಿಳಿಯದಂತಹ ಪರಿಸ್ಥಿತಿ ಎದುರಾಗಿದ್ದು, ದೇಹಗಳು ಪ್ರವಾಹದ ರಭಸಕ್ಕೆ ನಜ್ಜುಗುಜ್ಜಾಗಿ ಹೋಗಿವೆ.
ಇಂದು ಸಹ 3 ಸಾವಿರ ಜನರು ಶವಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಬಂಡೆಗಳ ಕೆಳಗೆ, ಕೆಸರು, ಕಾಡಿನ ಅಂಚಿನಲ್ಲಿ ಶೋಧ ನಡೆಸುತ್ತಿದ್ದು, 50ಕ್ಕೂ ಹೆಚ್ಚು ಜೆಸಿಬಿಗಳು ಕಾರ್ಯಾಚರಣೆಗೆ ಇಳಿದಿವೆ. ಸ್ಥಳದಲ್ಲಿ ನಾಪತ್ತೆಯಾಗಿರುವ 250ಕ್ಕೂ ಹೆಚ್ಚು ಜನರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಇನ್ನು ವಯನಾಡಿನಲ್ಲಿ ಆಗಸ್ಟ್.7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…