ವಯನಾಡು: ಭೀಕರ ಭೂಕುಸಿತಕ್ಕೆ ದೇವರನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 350ಕ್ಕೆ ಏರಿಕೆಯಾಗಿದೆ.
5ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ನಡೆಸಿ ವೈದ್ಯರೇ ಸುಸ್ತಾಗಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳ ಚೀರಾಟ ಮುಂದುವರಿದಿದೆ.
ಭೂಕುಸಿತ ಹಾಗೂ ಪ್ರವಾಹಕ್ಕೆ ಛಿದ್ರಗೊಂಡಿರುವ ದೇಹಗಳು ಘಟನೆಯ ಭೀಕರತೆ ಬೆಚ್ಚಿಡುತ್ತಿವೆ.
ಚಲಿಯಾರ್ ನದಿಯಲ್ಲೇ 135ಕ್ಕೂ ಹೆಚ್ಚು ದೇಹಗಳ ಅಂಗಾಂಗಳು ಪತ್ತೆಯಾಗಿವೆ. ಯಾರ ದೇಹ ಯಾರದ್ದು ಅನ್ನೋದೇ ತಿಳಿಯದಂತಹ ಪರಿಸ್ಥಿತಿ ಎದುರಾಗಿದ್ದು, ದೇಹಗಳು ಪ್ರವಾಹದ ರಭಸಕ್ಕೆ ನಜ್ಜುಗುಜ್ಜಾಗಿ ಹೋಗಿವೆ.
ಇಂದು ಸಹ 3 ಸಾವಿರ ಜನರು ಶವಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಬಂಡೆಗಳ ಕೆಳಗೆ, ಕೆಸರು, ಕಾಡಿನ ಅಂಚಿನಲ್ಲಿ ಶೋಧ ನಡೆಸುತ್ತಿದ್ದು, 50ಕ್ಕೂ ಹೆಚ್ಚು ಜೆಸಿಬಿಗಳು ಕಾರ್ಯಾಚರಣೆಗೆ ಇಳಿದಿವೆ. ಸ್ಥಳದಲ್ಲಿ ನಾಪತ್ತೆಯಾಗಿರುವ 250ಕ್ಕೂ ಹೆಚ್ಚು ಜನರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಇನ್ನು ವಯನಾಡಿನಲ್ಲಿ ಆಗಸ್ಟ್.7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…