ವಯನಾಡು: ವಯನಾಡು ಭೂಕುಸಿತ ದುರಂತದಲ್ಲಿ ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದ ಜನರಿಗೆ ಈಗ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಪರಿಹಾರ ಶಿಬಿರಗಳಲ್ಲಿ ಇದ್ದ ಸಂತ್ರಸ್ತ ಕುಟುಂಬಗಳನ್ನು ಬಾಡಿಗೆ ಮನೆಗೆ ಸ್ಥಳಾಂತರಿಸಲಾಗಿದೆ. ಕೇರಳ ಸರ್ಕಾರದ ಪ್ರಕಟಣೆಯ ಪ್ರಕಾರ ಒಟ್ಟು 2569 ಮಂದಿಯನ್ನು ಸರ್ಕಾರಿ ಮನೆ ಹಾಗೂ ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಲಾಗಿದೆ.
ಈ ಮಧ್ಯೆ ವಯನಾಡು ಭೂಕುಸಿತಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಮಗ್ರ ಮನವಿಯನ್ನು ಸಲ್ಲಿಸಿದೆ ಎಂದು ತಿಳಿದು ಬಂದಿದೆ.
ಪುನರ್ವಸತಿಗೊಂಡಿರುವ ಕುಟುಂಬಗಳಿಗೆ ಬ್ಯಾಕ್ ಟು ಹೋಮ್ ಕಿಟ್ ನೀಡುವ ಕಾರ್ಯ ಆರಂಭಿಸಲಾಗಿದೆ. ಇದರಲ್ಲಿ ಪೀಠೋಪಕರಣಗಳು, ಕಿಚನ್ ಕಿಟ್, ಆಹಾರ ಸಾಮಗ್ರಿ ಕಿಟ್, ನೈರ್ಮಲ್ಯ ಕಿಟ್ ಒಳಗೊಂಡಿರಲಿವೆ.
ಇನ್ನು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 119 ಮಂದಿ ನಾಪತ್ತೆಯಾಗಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…