ಕೇರಳ: ಕೇರಳದ ವಯನಾಡಿನಲ್ಲಿ ನಡೆದ ಭಾರೀ ಭೂಕುಸಿತ ದುರಂತದಲ್ಲಿ ಇದುವರೆಗೆ 93 ಮಂದಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದು, ಇದೇ ಅಂತಿಮ ಅಂಕಿ-ಅಂಶವಲ್ಲ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ವಯನಾಡಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ್ದು, ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. 34 ಮೃತದೇಹಗಳ ಗುರುತು ಪತ್ತೆಯಾಗಿದೆ. ದುರಂತದಲ್ಲಿ 120ಕ್ಕೂ ಹೆಚ್ಚು ಮಂದಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 93 ಮಂದಿ ಸಾವನ್ನಪ್ಪಿದ್ದಾರೆ. ಗುರುತು ಪತ್ತೆಹಚ್ಚಲು ಸಾಧ್ಯವಾಗದ ಮೃತದೇಹಗಳೂ ಕೂಡ ಇವೆ ಎಂದು ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗೆ ಎರಡು ಹೆಲಿಕಾಪ್ಟರ್ ಸಿದ್ಧವಿದ್ದು, ಪ್ರತಿಕೂಲ ಹವಾಮಾನದಿಂದ ಹಾರಾಟ ಸಾಧ್ಯವಾಗಿಲ್ಲ. ಬೆಂಗಳೂರಿನಿಂದ ಬಂದ ತಂಡಕ್ಕೆ ಟ್ರಾಫಿಕ್ ಫ್ರೀ ವ್ಯವಸ್ಥೆ ಮಾಡಿದ್ದೆವು. ಸಂತ್ರಸ್ತರಿಗಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಲಾಗಿದ್ದು, ವೈದ್ಯಕೀಯ ತಂಡ ನಿಯೋಜಿಸಲಾಗಿದೆ ಎಂದು ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…