ಕೇರಳ: ಕೇರಳದ ವಯನಾಡಿನಲ್ಲಿ ನಡೆದ ಭಾರೀ ಭೂಕುಸಿತ ದುರಂತದಲ್ಲಿ ಇದುವರೆಗೆ 93 ಮಂದಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದು, ಇದೇ ಅಂತಿಮ ಅಂಕಿ-ಅಂಶವಲ್ಲ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ವಯನಾಡಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ್ದು, ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. 34 ಮೃತದೇಹಗಳ ಗುರುತು ಪತ್ತೆಯಾಗಿದೆ. ದುರಂತದಲ್ಲಿ 120ಕ್ಕೂ ಹೆಚ್ಚು ಮಂದಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 93 ಮಂದಿ ಸಾವನ್ನಪ್ಪಿದ್ದಾರೆ. ಗುರುತು ಪತ್ತೆಹಚ್ಚಲು ಸಾಧ್ಯವಾಗದ ಮೃತದೇಹಗಳೂ ಕೂಡ ಇವೆ ಎಂದು ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗೆ ಎರಡು ಹೆಲಿಕಾಪ್ಟರ್ ಸಿದ್ಧವಿದ್ದು, ಪ್ರತಿಕೂಲ ಹವಾಮಾನದಿಂದ ಹಾರಾಟ ಸಾಧ್ಯವಾಗಿಲ್ಲ. ಬೆಂಗಳೂರಿನಿಂದ ಬಂದ ತಂಡಕ್ಕೆ ಟ್ರಾಫಿಕ್ ಫ್ರೀ ವ್ಯವಸ್ಥೆ ಮಾಡಿದ್ದೆವು. ಸಂತ್ರಸ್ತರಿಗಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಲಾಗಿದ್ದು, ವೈದ್ಯಕೀಯ ತಂಡ ನಿಯೋಜಿಸಲಾಗಿದೆ ಎಂದು ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…