ಬೆಂಗಳೂರು: ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಗಳನ್ನು ಉಪಾಹಾರ ಕೂಟಕ್ಕೆ ಬರುವಂತೆ ಮೊದಲು ಕರೆದಿದ್ದೆ. ಅವರು ಮೊದಲು ನೀವೇ ನಮ್ಮ ಮನೆಗೆ ಬನ್ನಿ, ಆಮೇಲೆ ಬರುತ್ತೇನೆ ಎಂದಿದ್ದರು. ಅದರಂತೆ ನಾನು ಅವರ ಮನೆಗೆ ಹೋಗಿದ್ದೆ. ನಮ್ಮ ಮನೆಗೆ ಆಹ್ವಾನಿಸಿದ್ದೆ. ನಾವಿಬ್ಬರೂ ಬಹಳ ಸಂತೋಷದಿಂದ ಉಪಹಾರ ಸೇವಿಸಿದ್ದೇವೆ. ಈ ವೇಳೆ ರಾಜಕೀಯವಾಗಿಯೂ ಚರ್ಚೆ ಮಾಡಿದ್ದೇವೆ ಎಂದು ಹೇಳೀದರು.
ಇದನ್ನೂ ಓದಿ:-ಸಂಚಾರ ಸಾಥಿ ಆಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು: ಕೇಂದ್ರ ಸರ್ಕಾರ ಸ್ಪಷ್ಟನೆ
ಪದವೀಧರ ಹಾಗೂ ಶಿಕ್ಷಕರ ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಈ ವಿಚಾರವಾಗಿ ನಾವಿಬ್ಬರೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಚರ್ಚೆ ಮಾಡಿದ್ದೇವೆ. ಪಕ್ಷ ಹಾಗೂ ಸರ್ಕಾರದ ವಿಚಾರವನ್ನು ಚರ್ಚೆ ಮಾಡಿದ್ದೇವೆ. ಅಧಿವೇಶನದಲ್ಲಿ ಯಾವ ರೀತಿ ಹೋರಾಟ ಮಾಡಬೇಕು, ಶಾಸಕರಿಗೆ ನೀಡಬೇಕಾದ ಸಂದೇಶಗಳು, ವಿರೋಧ ಪಕ್ಷಗಳು ಯಾವೆಲ್ಲಾ ವಿಚಾರ ಪ್ರಸ್ತಾಪಿಸಬಹುದು ಎಂದು ಚರ್ಚೆ ಮಾಡಿದ್ದೇವೆ. ವಿರೋಧ ಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದರು, ನಾವು ಒಂದೇ ಧ್ವನಿಯಲ್ಲಿ ಎದುರಿಸಲು ಸಿದ್ಧರಿದ್ದೇವೆ ಎಂದರು.
ಇನ್ನು ದೆಹಲಿಗೆ ಹೋಗಿ ಸರ್ವಪಕ್ಷ ಸಂಸದರ ಸಭೆ ನಡೆಸುವ ಬಗ್ಗೆ ಚರ್ಚೆ ಮಾಡಿದ್ದು, ಡಿ.8 ರಂದು ದೆಹಲಿಗೆ ಹೋಗಿ ವಾಪಸ್ಸಾಗಬೇಕು ಎಂದು ತೀರ್ಮಾನಿಸಿದ್ದೇವೆ. ಮೇಕೆದಾಟು ವಿಚಾರವಾಗಿ ನ್ಯಾಯಾಲಯದ ತೀರ್ಪು ಬಂದಿದ್ದು, ಮೆಕ್ಕೆಜೋಳ ದರ ವಿಚಾರ, ಕೇಂದ್ರ ಸರ್ಕಾರದಿಂದ ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಅನುದಾನ ಬಾರದಿರುವ ವಿಚಾರವಾಗಿ ಸಂಸದರ ಜತೆ ಚರ್ಚೆ ಮಾಡಿ ಅವರಿಗೆ ಜವಾಬ್ದಾರಿ ನೀಡಬೇಕಾಗಿದೆ. ಈ ಸಭೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನು ಹಾಗೂ ಜೆಡಿಎಸ್ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…