ರಾಜ್ಯ

ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ ಉಳಿದ ಅವಧಿಯಲ್ಲಿ ಇದನ್ನೂ ಸಹ ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಪಥ ಮಾಡಿದರು.

ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಅವರು ಮಾತನಾಡಿದರು.

ನಾವು 2023 ರ ವಿಧಾನಸಭೆ ಚುನಾವಣೆ ಪ್ರಾರಂಭಕ್ಕೂ ಮುನ್ನ ರಾಜ್ಯದ ಜನತೆಗೆ ಒಟ್ಟು 580 ಭರವಸೆಗಳನ್ನು ಕೊಟ್ಟಿದ್ದೇವು. ಈಗಾಗಲೇ 290 ಭರವಸೆಗಳನ್ನು ಈಡೇರಿಸಿದ್ದೇವೆ. ಮುಂದಿನ ಎರಡು ವರ್ಷಗಳ ಕಾಲ ನಾವೇ ಅಧಿಕಾರದಲ್ಲಿರುವುದರಿಂದ ಎಲ್ಲವನ್ನೂ ಕಾಲಮಿತಿಯೊಳಗೆ ಅನುಷ್ಠಾನ ಮಾಡುತ್ತೇವೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಮನವಿ ಮಾಡಿದರು.

ಪ್ರಮುಖವಾಗಿ ನಾವು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಒಂದೊಂದಾಗಿ ಈಡೇರಿಸಿದ್ದಲ್ಲದೆ ಉಳಿದ ಭರವಸೆಗಳನ್ನೂ ಈಡೇರಿಸಿ ನಾವು ನಿಮ್ಮ ಮುಂದೆ ಧನ್ಯತೆ ಅರ್ಪಿಸಲು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇವೆ. ನಾವು ಅಧಿಕಾರಕ್ಕೆ ಬಂದ ಬಳಿಕ ಸರ್ವ ಜಾತಿ, ಸರ್ವ ಧರ್ಮದ ಸಕಲ ಜನತೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನು ಕೊಂಡಾಡಿದರು.

ಇಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶ ಮತ್ತು ಕಂದಾಯ ಇಲಾಖೆಯ ಕ್ರಾಂತಿಕಾರಿ ಜನೋಪಯೋಗಿ ಕೆಲಸಗಳ ಜನಾರ್ಪಣೆ ಸಮಾವೇಶವನ್ನು ಸ್ವಯಂಸ್ಫೂರ್ತಿಯಿಂದ ತುಮಕೂರಿನಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

2 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago