ಮುಂದಿನ ತಿಂಗಳು 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಯಾವೆಲ್ಲಾ ರಾಜಕೀಯ ಗಣ್ಯರು ತೆರಳಲಿದ್ದಾರೆ, ಯಾರಿಗೆಲ್ಲಾ ಆಹ್ವಾನ ಸಿಕ್ಕಿದೆ ಎಂಬ ಚರ್ಚೆಗಳು ಸದ್ಯ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಇನ್ನು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ ಹೋಗ್ತಾರಾ ಅಥವಾ ಇಲ್ವಾ ಎಂಬ ಪ್ರಶ್ನೆಗಳೂ ಸಹ ಮೂಡಿವೆ.
ಈ ಪ್ರಶ್ನೆಗೆ ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಮಾಧ್ಯಮದವರ ಜತೆ ಮಾತಾನಾಡಿದಾಗ ಉತ್ತರಿಸಿದ್ದಾರೆ. “ನಾವು ಅಯೋಧ್ಯೆಗೆ ವಿರುದ್ಧ ಇಲ್ಲ, ದೇವಸ್ಥಾನ ಕಟ್ಟಲಿಕ್ಕೆ ವಿರುದ್ಧ ಇಲ್ಲ, ರಾಮಮಂದಿರಕ್ಕೆ ವಿರುದ್ಧ ಇಲ್ಲ. ನಾವು ರಾಮಮಂದಿರ ಪರನೇ ಇದ್ದೇವೆ. ನಮ್ಮೂರಿನಲ್ಲೆಲ್ಲಾ ರಾಮಮಂದಿರಗಳನ್ನು ಕಟ್ಟಿಲ್ವಾ ನಾವು? ಭಜನೆ ಮಾಡಲ್ವ ನಮ್ಮೂರಲ್ಲಿ? ಅದೆಲ್ಲಾ ಮಾಡ್ತಾ ಇದ್ದೇವೆ. ನಮ್ಮೂರಲ್ಲಿ ಇದ್ದಾಗ ನಾನೂ ಭಜನೆಗೆ ಹೋಗ್ತಿದ್ದೆ. ಅದು ಬೇರೆ ಪ್ರಶ್ನೆ. ಅವರು ಈಗ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ತಾ ಇದ್ದಾರೆ ಬಹಳ ಸಂತೋಷ, ಉದ್ಘಾಟನೆ ಮಾಡ್ತಾ ಇದ್ದಾರೆ ಸಂತೋಷ” ಎಂದು ಹೇಳಿಕೆ ನೀಡಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…