Mysore
26
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

ವಿವಿಗಳನ್ನು ಮುಚ್ಚುತ್ತಿಲ್ಲ ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆಶಿ

ಬೆಂಗಳೂರು: 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ, ಅವುಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ವಿಚಾರದ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದರು.

ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿಲ್ಲ, ಬದಲಾಗಿ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೆಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ವಿವಿಯಲ್ಲಿ ಸರ್ಟಿಫಿಕೆಟ್‌ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ.

ಎಸ್‌ಎಂ ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗ ಪಿಎಇಎಸ್‌ ವಿವಿಯಲ್ಲಿ ಓದಿದ್ದರೂ ವಿದೇಶದಲ್ಲಿ ಪ್ರವೇಶ ಸಿಗಲಿಲ್ಲ. ಪಿಇಎಸ್‌ ಫೇಮಸ್‌ ಕಾಲೇಜು ಆದರೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿವಿಗಳನ್ನು ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿಲ್ಲ ಎಂದು ತಿಳಿಸಿದರು.

Tags:
error: Content is protected !!