Midterm elections after December: Govinda Karajola
ಕಲಬುರ್ಗಿ: ಜಾತಿ ಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮತ್ತು ಅವರ ಹೈಕಮಾಂಡ್ ಗೊಂದಲ ಮೂಡಿಸುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ಥಿಕ, ಶೈಕ್ಷಣಿಕ ಕಾಳಜಿ ಇದ್ದರೆ 2013ರಿಂದ 2018ರವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಕಾಂತರಾಜುರವರನ್ನು ನೇಮಿಸಿ ವರದಿ ತೆಗೆದುಕೊಂಡರು. 180 ಕೋಟಿ ಖರ್ಚು ಮಾಡಿದ ಆ ವರದಿ ಏನಾಗಿದೆ? ಕಸದ ಬುಟ್ಟಿಗೆ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.
ಇದನ್ನು ಓದಿ : ಜಾತಿಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಬಂದ್ ಮಾಡುವ ಸಂಚು: ಆರ್.ಅಶೋಕ್ ಆರೋಪ
ನಾವು ದಾರಿ ತಪ್ಪಿಸುತ್ತಿಲ್ಲ. ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಪಕ್ಷ ದಾರಿ ತಪ್ಪಿಸುತ್ತಿವೆ. ಆವತ್ತು ಜಾತಿಗಳ ಅಂಕಿ ಸಂಖ್ಯೆ ಬಿಡುಗಡೆ ಮಾಡಿದ್ದರು. ಗೌಪ್ಯವಾಗಿ ಇಡಬೇಕಾದ ಅಂಕಿ ಅಂಶವನ್ನು ಯಾಕೆ ಗೌಪ್ಯವಾಗಿಡಲಿಲ್ಲ? ಎಂದು ಪ್ರಶ್ನೆ ಮಾಡಿದರು.
ಕ್ರಿಶ್ಚಿಯನ್ ಲಿಂಗಾಯತರು ಇದ್ದಾರಾ? ಜೈನ ಪಂಚಮಸಾಲಿ ಇದ್ದಾರಾ? ಕ್ರಿಶ್ಚಿಯನ್ ದಲಿತರು ಇದ್ದಾರಾ? ಕ್ರಿಶ್ಚಿಯನ್ ದಲಿತರು ಎನ್ನಬೇಡಿ; ಯಾವುದೇ ವ್ಯಕ್ತಿ ಧರ್ಮಾಂತರ ಆದರೆ ಧರ್ಮಾಂತರ ಆದ ದಿನದಿಂದ ಅವನ ಪೂರ್ವಾಶ್ರಮದ ಹಂಗು ಇರುವುದಿಲ್ಲ. ಪೂರ್ವಾಶ್ರಮದ ಸಂಬಂಧ ಕಡಿದು ಹೋಗುತ್ತದೆ. ಧರ್ಮಾಂತರ ವಾದರೆ ಕ್ರಿಶ್ಚಿಯನ್ ಆದರೆ ಕ್ರಿಶ್ಚಿಯನ್, ಇಸ್ಲಾಂ ಆಗಿದ್ದರೆ ಇಸ್ಲಾಂ ಧರ್ಮ ಇರುತ್ತದೆ ಎಂದು ತಿಳಿಸಿದರು.
ಭೇರ್ಯ ಮಹೇಶ್ ಎಸ್ಡಿಎಂಸಿ ಕಾರ್ಯವೈಖರಿಯನ್ನು ಪರಿಗಣಿಸಿ ಶಿಕ್ಷಣ ಇಲಾಖೆಯಿಂದ ಪ್ರಶಸ್ತಿ ನೀಡಿಕೆ ಕೆ.ಆರ್.ನಗರ: ಅತ್ಯುತ್ತಮ ಎಸ್ಡಿಎಂಸಿ ಪ್ರಶಸ್ತಿಗೆ ಅಡಗನಹಳ್ಳಿ ಸರ್ಕಾರಿ…
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…