Midterm elections after December: Govinda Karajola
ಕಲಬುರ್ಗಿ: ಜಾತಿ ಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮತ್ತು ಅವರ ಹೈಕಮಾಂಡ್ ಗೊಂದಲ ಮೂಡಿಸುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ಥಿಕ, ಶೈಕ್ಷಣಿಕ ಕಾಳಜಿ ಇದ್ದರೆ 2013ರಿಂದ 2018ರವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಕಾಂತರಾಜುರವರನ್ನು ನೇಮಿಸಿ ವರದಿ ತೆಗೆದುಕೊಂಡರು. 180 ಕೋಟಿ ಖರ್ಚು ಮಾಡಿದ ಆ ವರದಿ ಏನಾಗಿದೆ? ಕಸದ ಬುಟ್ಟಿಗೆ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.
ಇದನ್ನು ಓದಿ : ಜಾತಿಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಬಂದ್ ಮಾಡುವ ಸಂಚು: ಆರ್.ಅಶೋಕ್ ಆರೋಪ
ನಾವು ದಾರಿ ತಪ್ಪಿಸುತ್ತಿಲ್ಲ. ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಪಕ್ಷ ದಾರಿ ತಪ್ಪಿಸುತ್ತಿವೆ. ಆವತ್ತು ಜಾತಿಗಳ ಅಂಕಿ ಸಂಖ್ಯೆ ಬಿಡುಗಡೆ ಮಾಡಿದ್ದರು. ಗೌಪ್ಯವಾಗಿ ಇಡಬೇಕಾದ ಅಂಕಿ ಅಂಶವನ್ನು ಯಾಕೆ ಗೌಪ್ಯವಾಗಿಡಲಿಲ್ಲ? ಎಂದು ಪ್ರಶ್ನೆ ಮಾಡಿದರು.
ಕ್ರಿಶ್ಚಿಯನ್ ಲಿಂಗಾಯತರು ಇದ್ದಾರಾ? ಜೈನ ಪಂಚಮಸಾಲಿ ಇದ್ದಾರಾ? ಕ್ರಿಶ್ಚಿಯನ್ ದಲಿತರು ಇದ್ದಾರಾ? ಕ್ರಿಶ್ಚಿಯನ್ ದಲಿತರು ಎನ್ನಬೇಡಿ; ಯಾವುದೇ ವ್ಯಕ್ತಿ ಧರ್ಮಾಂತರ ಆದರೆ ಧರ್ಮಾಂತರ ಆದ ದಿನದಿಂದ ಅವನ ಪೂರ್ವಾಶ್ರಮದ ಹಂಗು ಇರುವುದಿಲ್ಲ. ಪೂರ್ವಾಶ್ರಮದ ಸಂಬಂಧ ಕಡಿದು ಹೋಗುತ್ತದೆ. ಧರ್ಮಾಂತರ ವಾದರೆ ಕ್ರಿಶ್ಚಿಯನ್ ಆದರೆ ಕ್ರಿಶ್ಚಿಯನ್, ಇಸ್ಲಾಂ ಆಗಿದ್ದರೆ ಇಸ್ಲಾಂ ಧರ್ಮ ಇರುತ್ತದೆ ಎಂದು ತಿಳಿಸಿದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…