Midterm elections after December: Govinda Karajola
ಕಲಬುರ್ಗಿ: ಜಾತಿ ಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮತ್ತು ಅವರ ಹೈಕಮಾಂಡ್ ಗೊಂದಲ ಮೂಡಿಸುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ಥಿಕ, ಶೈಕ್ಷಣಿಕ ಕಾಳಜಿ ಇದ್ದರೆ 2013ರಿಂದ 2018ರವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಕಾಂತರಾಜುರವರನ್ನು ನೇಮಿಸಿ ವರದಿ ತೆಗೆದುಕೊಂಡರು. 180 ಕೋಟಿ ಖರ್ಚು ಮಾಡಿದ ಆ ವರದಿ ಏನಾಗಿದೆ? ಕಸದ ಬುಟ್ಟಿಗೆ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.
ಇದನ್ನು ಓದಿ : ಜಾತಿಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಬಂದ್ ಮಾಡುವ ಸಂಚು: ಆರ್.ಅಶೋಕ್ ಆರೋಪ
ನಾವು ದಾರಿ ತಪ್ಪಿಸುತ್ತಿಲ್ಲ. ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಪಕ್ಷ ದಾರಿ ತಪ್ಪಿಸುತ್ತಿವೆ. ಆವತ್ತು ಜಾತಿಗಳ ಅಂಕಿ ಸಂಖ್ಯೆ ಬಿಡುಗಡೆ ಮಾಡಿದ್ದರು. ಗೌಪ್ಯವಾಗಿ ಇಡಬೇಕಾದ ಅಂಕಿ ಅಂಶವನ್ನು ಯಾಕೆ ಗೌಪ್ಯವಾಗಿಡಲಿಲ್ಲ? ಎಂದು ಪ್ರಶ್ನೆ ಮಾಡಿದರು.
ಕ್ರಿಶ್ಚಿಯನ್ ಲಿಂಗಾಯತರು ಇದ್ದಾರಾ? ಜೈನ ಪಂಚಮಸಾಲಿ ಇದ್ದಾರಾ? ಕ್ರಿಶ್ಚಿಯನ್ ದಲಿತರು ಇದ್ದಾರಾ? ಕ್ರಿಶ್ಚಿಯನ್ ದಲಿತರು ಎನ್ನಬೇಡಿ; ಯಾವುದೇ ವ್ಯಕ್ತಿ ಧರ್ಮಾಂತರ ಆದರೆ ಧರ್ಮಾಂತರ ಆದ ದಿನದಿಂದ ಅವನ ಪೂರ್ವಾಶ್ರಮದ ಹಂಗು ಇರುವುದಿಲ್ಲ. ಪೂರ್ವಾಶ್ರಮದ ಸಂಬಂಧ ಕಡಿದು ಹೋಗುತ್ತದೆ. ಧರ್ಮಾಂತರ ವಾದರೆ ಕ್ರಿಶ್ಚಿಯನ್ ಆದರೆ ಕ್ರಿಶ್ಚಿಯನ್, ಇಸ್ಲಾಂ ಆಗಿದ್ದರೆ ಇಸ್ಲಾಂ ಧರ್ಮ ಇರುತ್ತದೆ ಎಂದು ತಿಳಿಸಿದರು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…