Farmers Attempt to Lay Siege to CM's House Protesting Land Acquisition
ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.
ಅವರು ಇಂದು ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73, 74ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.
ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…