ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಕಾಲದಲ್ಲೇ ಆಗಬೇಕು ಎಂದು ಇತ್ತು. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ. ಹೈಕಮಾಂಡ್ಗೆ ಯಾವ ಕಾಲದಲ್ಲಿ ಏನು ಆಗಬೇಕು ಎಂದು ಎಲ್ಲಾ ಗೊತ್ತಿದೆ. ಮಾಡುವ ಸ್ಥಾನದಲ್ಲಿ ಖರ್ಗೆಯವರು ಕೂತಿದ್ದಾರೆ. ನಾವು ಇನ್ನೇನು ಮಾತನಾಡುವುದು ಎಂದು ಹೇಳಿದರು.
ಇನ್ನು ಸಿಎಂ ಹಾಗೂ ಡಿಸಿಎಂ ಅವರು ರಾಹುಲ್ ಗಾಂಧಿ ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಇಬ್ಬರನ್ನೂ ಕರೆದು ಮಾತನಾಡಿದ್ದಾರೆ. ದೆಹಲಿಗೆ ಹೋಗುವ ವಿಚಾರ ಮಾತನಾಡಿದ್ದಾರೆ. ಇದು ಹೈಕಮಾಂಡ್ಗೆ ಬಿಟ್ಟ ವಿಚಾರ. ನಾನು ಯಾರ ಪರವೂ ಇಲ್ಲ. ವಿರೋಧವೂ ಇಲ್ಲ ಎಂದು ಹೇಳಿದರು.
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…
ಟಿ-೨೦ವಿಶ್ವಕಪ್ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…