ರಾಜ್ಯ

ರಾಜ್ಯದಲ್ಲಿ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ: ಆರ್‌. ಅಶೋಕ್ ವೆಂಗ್ಯ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ರಾಜ್ಯದ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಅವರು ಲೇವಡಿ ಮಾಡಿದರು.

ಇವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಶೋಕ್ ಅವರು; ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರನ್ನು ನನ್ನನ್ನು ಕ್ಲರ್ಕ್, ಜವಾನನ ರೀತಿ ನಡೆಸಿಕೊಂಡರು ಎಂದರು.

ಕಾಂಗ್ರೆಸ್ ಸರಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್ ಗಳನ್ನು ಮಾರಾಟಕ್ಕೆ ಇಟ್ಟಿದೆ. ಹಿಂದೆ ಲಕ್ಷ್ಮಣರಾವ್ ಅವರಂಥ ಮಹಾನುಭಾವರು ಇವನ್ನೆಲ್ಲ ಕಾಪಾಡಿಕೊಂಡು ಬಂದಿದ್ದರು. ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಅಶೋಕ್ ಟೀಕಿಸಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago