ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ರಾಜ್ಯದ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಅವರು ಲೇವಡಿ ಮಾಡಿದರು.
ಇವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಶೋಕ್ ಅವರು; ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರನ್ನು ನನ್ನನ್ನು ಕ್ಲರ್ಕ್, ಜವಾನನ ರೀತಿ ನಡೆಸಿಕೊಂಡರು ಎಂದರು.
ಕಾಂಗ್ರೆಸ್ ಸರಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್ ಗಳನ್ನು ಮಾರಾಟಕ್ಕೆ ಇಟ್ಟಿದೆ. ಹಿಂದೆ ಲಕ್ಷ್ಮಣರಾವ್ ಅವರಂಥ ಮಹಾನುಭಾವರು ಇವನ್ನೆಲ್ಲ ಕಾಪಾಡಿಕೊಂಡು ಬಂದಿದ್ದರು. ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಅಶೋಕ್ ಟೀಕಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…