Real Illegalities Happened Under Congress Leadership: BJP State President B.Y. Vijayendra
ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ನ್ಯಾಯ ಕೊಡಿಸುವ ವಿಷಯದಲ್ಲಿ ಕಾಂಗ್ರೆಸ್ ಪಕ್ಷಕ್ಕಿಂತಲು ಬಿಜೆಪಿ ಯಾವಾಗಲೂ ಒಂದು ಹೆಜ್ಜೆ ಮುಂದೆ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿಲ್ಲ. ಇದು ವೈಜ್ಞಾನಿಕವಾಗಿ ನಡೆಯಲಿ ಎಂಬುದಷ್ಟೇ ನಮ್ಮ ಮನವಿ ಎಂದು ಸ್ಪಷ್ಟಪಡಿಸಿದರು.
ಗೊಂದಲಗಳನ್ನು ಸರಿಪಡಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರೆ ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ, ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯನ್ನು ವಿರೋಧಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳುತ್ತಿದ್ದಾರೆ. ಇವರಿಂದ ನಾವು ಸಾಮಾಜಿಕ ನ್ಯಾಯದ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.
ಇದನ್ನು ಓದಿ : ಆರ್ಥಿಕ, ಸಾಮಾಜಿಕ ಸಮೀಕ್ಷೆ ವಿಚಾರದಲ್ಲಿ ಸರ್ಕಾರಕ್ಕೆ ಯಾಕಿಷ್ಟು ಆತುರ?: ವಿಜಯೇಂದ್ರ ಪ್ರಶ್ನೆ
ಸಮೀಕ್ಷೆಯಲ್ಲಿ ಸಾಕಷ್ಟು ಗೊಂದಲಗಳು ಹೆಚ್ಚುತ್ತಿದೆ. ಅನೇಕ ಕಡೆ ತಾಂತ್ರಿಕ ಸಮಸ್ಯೆ, ಗಣತಿದಾರರ ಮೇಲೆ ಹಲ್ಲೆ, ನಾಯಿ ಕಡಿತ, ಮಾಹಿತಿ ಕೊಡದಿರುವುದು ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗಿವೆ. ಇದನ್ನು ಸರಿಪಡಿಸಿ ಎಂದು ಹೇಳುವುದು ಅನ್ಯಾಯವೇ ಎಂದು ಪ್ರಶ್ನೆ ಮಾಡಿದರು.
ಆಯೋಗ ಯಾರದೋ ಒತ್ತಡಕ್ಕೆ ಮಣಿದು ಕೆಲಸ ಮಾಡಬಾರದು. ಸ್ವತಂತ್ರವಾಗಿ ಕೆಲಸ ಮಾಡಿದರೆ ಇಂತಹ ಅವಘಡಗಳು ಸಂಬಂಧಿಸುವುದಿಲ್ಲ. ಪ್ರಮಾದವನ್ನು ಸರಿಪಡಿಸಿ ಎಂದು ಹೇಳಿದರೆ ನಮ್ಮ ಮೇಲೆ ಗೂಬೆ ಕೂರಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮೀಕ್ಷೆ ವೇಳೆ ಗಣತಿದಾರರು ಸಾರ್ವಜನಿಕರಿಗೆ 60 ಪ್ರಶ್ನೆಗಳನ್ನು ಕೇಳುತ್ತಿರುವುದರ ಬಗ್ಗೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ. ನಾವು ಮಾತನಾಡಿದರೆ ಹಿಂದುಳಿದ ವರ್ಗಗಳ ವಿರೋಧಿ. ಹಾಗಾದರೆ ಡಿಸಿಎಂ ಮಾತನಾಡಿರುವುದಕ್ಕೆ ಸಿಎಂ ಏನು ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದರು.
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…