ರಾಜ್ಯ

ಪ್ರತ್ಯೇಕ ದೇಶ ಕೇಳೋಕೆ ಆಗಲ್ಲ, ನಮ್ಮದು ಫೆಡರಲಿಸಂ ದೇಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆಯನ್ನು ಪ್ರಸ್ತಾಪಿಸಿದ ಸಿಎಂ, ಪ್ರತ್ಯೇಕ ದೇಶ ಕೇಳೋಕೆ ಆಗಲ್ಲ. ದೇಶ ಸಾರ್ವಭೌಮತೆ ಇರಬೇಕು. ನಮ್ಮದು ಫೆಡರಿಸಂ ದೇಶ ಎಂದು ಸಂಸದ ಡಿಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಬಜೆಟ್ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ಮಾತನಾಡಿದರು. ಕೇಂದ್ರ ಸರ್ಕಾರಕ್ಕೆ ತೆರಿಗೆ ಸಂಗ್ರಹಕ್ಕೆ ಬೇರೆ ಏರಿಯಾ ಇಲ್ಲ. ರಾಜ್ಯದಿಂದ ಕೊಡುವ ತೆರಿಗೆ ಹಂಚಿಕೆ ಮಾಡುತ್ತಾರೆ. ನಮಗೆ ಸಿಗಬೇಕಾದ ಪಾಲು ಸಿಗುತ್ತಿಲ್ಲ. ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡುತ್ತೆ. ಆದರೂ ನಮಗೆ ಅನ್ಯಾಯ ಆಗುತ್ತಿದೆ ಎಂದು ಹೇಳಿದರು.

ಅಖಂಡ ಭಾರತವಾಗಿಯೇ ಇರಬೇಕು. ದಕ್ಷಿಣ ಭಾರತ, ಉತ್ತರ ಭಾರತ ಅಂತ ಇರಬಾರದು. ಅಖಂಡ ಭಾರತವಾಗಿಯೇ ಇರಬೇಕು. ಅಖಂಡ ಕರ್ನಾಟಕವಾಗಿಯೇ ಕರ್ನಾಟಕ ಇರಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿಕೆ ಸುರೇಶ್ ಹೇಳಿದ್ದೇನು?: ದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದರು. ಈ ವೇಳೆ ಇಂದಿನ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್, ಇಂದಿನ ಬಜೆಟ್‍ನಲ್ಲಿ ಹೊಸತೇನು ಇಲ್ಲ. ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ಆದ್ರೆ ಪ್ರತ್ಯೇಕ ದೇಶ ಕೇಳಬೇಕಾಗುತ್ತದೆ ಎಂದು ದೆಹಲಿಯಲ್ಲಿ ಸಂಸದರು ಪ್ರತಿಕ್ರಿಯೆ ನೀಡಿದ್ದರು. ಸದ್ಯ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago