ರಾಜ್ಯ

ನಮಗೆ ಮೋದಿ ರಾಮ ಬೇಡ, ದಶರಥ ರಾಮ ಬೇಕು: ಪರಮೇಶ್ವರ್‌

ಬೆಂಗಳೂರು: ನಮಗೆ ಮೋದಿಯ ರಾಮ ಬೇಡ, ದಶರಥ ರಾಮ ಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನಿನ್ನೆ(ಸೋಮವಾರ) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿರುವುದಕ್ಕೆ ಟೀಕೆ ಮಾಡಿರುವ ಬಿಜೆಪಿಗೆ, ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು? ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧಿ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಎಂದು ಪರಮೇಶ್ವರ್‌ ಪ್ರಶ್ನ ಮಾಡಿದ್ದಾರೆ.

ನಾವೆಲ್ಲ ಶ್ರೀರಾಮನ ಭಕ್ತರೇ, ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳ್ತೀವಿ. ಶ್ರೀರಾಮ ಇವರಾರೋ 4 ಜನಕ್ಕೆ ಆಗೋದಲ್ಲ. ನಮಗೆ ದಶರಥ ರಾಮ ಬೇಕು. ನಮಗೆ ಮೋದಿ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮ ರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು ರಾಮ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡುವವರು ನಮಗೆ ಬೇಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಕಿಡಿಕಾರಿದ್ದಾರೆ.

 

andolanait

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

2 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

2 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

2 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago