ರಾಜ್ಯ

ನಮಗೆ ಮೋದಿ ರಾಮ ಬೇಡ, ದಶರಥ ರಾಮ ಬೇಕು: ಪರಮೇಶ್ವರ್‌

ಬೆಂಗಳೂರು: ನಮಗೆ ಮೋದಿಯ ರಾಮ ಬೇಡ, ದಶರಥ ರಾಮ ಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನಿನ್ನೆ(ಸೋಮವಾರ) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿರುವುದಕ್ಕೆ ಟೀಕೆ ಮಾಡಿರುವ ಬಿಜೆಪಿಗೆ, ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು? ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧಿ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಎಂದು ಪರಮೇಶ್ವರ್‌ ಪ್ರಶ್ನ ಮಾಡಿದ್ದಾರೆ.

ನಾವೆಲ್ಲ ಶ್ರೀರಾಮನ ಭಕ್ತರೇ, ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳ್ತೀವಿ. ಶ್ರೀರಾಮ ಇವರಾರೋ 4 ಜನಕ್ಕೆ ಆಗೋದಲ್ಲ. ನಮಗೆ ದಶರಥ ರಾಮ ಬೇಕು. ನಮಗೆ ಮೋದಿ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮ ರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು ರಾಮ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡುವವರು ನಮಗೆ ಬೇಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಕಿಡಿಕಾರಿದ್ದಾರೆ.

 

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago