ರಾಜ್ಯ

ನಮ್ಮಲ್ಲಿ ಸಿಎಂ ಆಗೊ ಅರ್ಹತೆ ಇರುವವರು 50 ಜನ‌ರಿದ್ದಾರೆ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ರಾಜಕೀಯ ಚರ್ಚೆ ಮಾಡಲ್ಲ, ಅಭಿವೃದ್ಧಿ ಬಗ್ಗೆ ಮಾತನಾಡ್ತೀನಿ. ಹೈಕಮಾಂಡ್ ಇದೆ, ಶಾಸಕಾಂಗ ಸಭೆ ಇದೆ ಅಲ್ಲಿ ತೀರ್ಮಾನ ಮಾಡ್ತಾರೆ ವಿರೋಧ ಪಕ್ಷದ ಜೊತೆ ಸೇರಿ ಮಾಧ್ಯಮದವರು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಹೇಳಿದರು.

ಸಿದ್ದು 5 ವರ್ಷ ಸಿಎಂ ಆಗಿರ್ತಾರೆ ಎಂಬ ಮಹದೇವಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮಲ್ಲಿ ಮುಖ್ಯಮಂತ್ರಿ ಆಗಲು ಅರ್ಹತೆ ಇರುವವರು 50 ಜನ‌ ಇದ್ದಾರೆ. ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಮಾಡಲಿದೆ, ಈಗ ಸಿಎಂ ಸೀಟ್ ಖಾಲಿ ಇಲ್ಲ. ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಸಿದ್ದರಾಮಯ್ಯ, ಡಿಕೆಶಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ಗಂಭೀರವಾಗಿ ಕೆಲಸ ಮಾಡ್ತಿದ್ದಾರೆ‌. ನಾವುಗಳು ಮಾತನಾಡಿ ಪ್ರಯೋಜನ ಇಲ್ಲ ಎಂದರು.

ಆಣೆ ಪ್ರಮಾಣಕ್ಕೆ ಮಾಜಿ ಸಿಎಂ ಎಚ್‌ ಡಿಕೆ ಆಹ್ವಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರಿಗೆ ಮಾಡಲು ಕೆಲಸವಿಲ್ಲ. ವರ್ಗಾವಣೆಯಲ್ಲಿ ನೇರವಾಗಿ, ಪರೋಕ್ಷವಾಗಿ ನಾವಿಲ್ಲ ಎಂದು ಧರ್ಮಸ್ಥಳದಲ್ಲಿ ಆಣೆ ಮಾಡಲಿ. ಹಳೆಯದಲ್ಲೇ ಬೇಡ ಇವತ್ತಿನದು ಬೇಕು ಅಂತಾರೆ? ಆಯ್ತು ಹಳೆಯದು ಬೇಡ 2018ರ 14 ತಿಂಗಳು ಆಡಳಿತ ಬಗ್ಗೆಯೇ ಆಣೆ ಮಾಡಲಿ. ದೇವೇಗೌಡರ ಬಗ್ಗೆ ನಾನು ಮಾತನಾಡಲ್ಲ. ಕುಮಾರಸ್ವಾಮಿ ಆಣೆ ಪ್ರಮಾಣದ ವಿಚಾರ ಎತ್ತಿದ್ದಾರೆ. ಅವರು ಎಲ್ಲಿಗೆ ಬಂದು ಪ್ರಮಾಣ ಮಾಡ್ತಾರೆ ಅವರೇ ಹೇಳಲಿ ಎಂದರು.

ಆಪರೇಷನ್ ಕಮಲ, ಹಸ್ತ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ‌‌. ಬಿಜೆಪಿ-ಜೆಡಿಎಸ್ ಮೈತ್ರಿ ಎರಡು ಪಕ್ಷದ ಶಾಸಕರಿಗೆ ಸಮಾಧಾನ ಇಲ್ಲ. ಹಾಗಾಗಿ ಆಪರೇಷನ್ ಕಮಲದ ವಿಚಾರ ತೆಗೆದು ಗೊಂದಲ ಸೃಷ್ಟಿಸುತ್ತಿದ್ದಾರೆ‌‌ ಎಂದು ಆರೋಪಿಸಿದರು.

ಕಾಂಗ್ರೆಸ್ ಶಾಸಕರಿಗೆ 50ಕೋಟಿ ಆಫರ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರಿಗೆ ಆಫರ್ ಬಂದಿದ್ಯೋ ಗೊತ್ತಿಲ್ಲ. ಆ ವಿಚಾರ ಹೇಳಿದ ರವಿ ಪಕ್ಕದಲ್ಲೇ ಇದ್ದಾನೆ. ಅವನಿಗೆ ಏನಾದರೂ ದುಡ್ಡು ಬಂದಿದ್ದರೆ ನಮಗೂ ಕೊಡಲಿ ಎಂದು ನಗೆ ಚಟಾಕಿ ಹಾರಿಸಿದರು.

ಚಲುವರಾಯಸ್ವಾಮಿ ವಿರುದ್ಧ ಇಡಿ ದಾಳಿಗೆ ಷಡ್ಯಂತ್ರ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 2 ತಿಂಗಳ ಹಿಂದಯೇ ಇಡಿಗೆ ನನ್ನ ವಿರುದ್ಧ ಮೂಗರ್ಜಿಗಳು ಹೋಗಿರುವ ಮಾಹಿತಿ ಇದೆ. ಮೈತ್ರಿ ಆದವರ ಹೊಂದಾಣಿಕೆ ಚೆನ್ನಾಗಿರಲೇಬೇಕು ಅವರು ಏನು ಬೇಕಾದರೂ ಮಾಡಲಿ ಎಂದು ತಿಳಿಸಿದರು.

lokesh

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

5 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

6 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

7 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

7 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

8 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

8 hours ago