ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ರಾಜಕೀಯ ಚರ್ಚೆ ಮಾಡಲ್ಲ, ಅಭಿವೃದ್ಧಿ ಬಗ್ಗೆ ಮಾತನಾಡ್ತೀನಿ. ಹೈಕಮಾಂಡ್ ಇದೆ, ಶಾಸಕಾಂಗ ಸಭೆ ಇದೆ ಅಲ್ಲಿ ತೀರ್ಮಾನ ಮಾಡ್ತಾರೆ ವಿರೋಧ ಪಕ್ಷದ ಜೊತೆ ಸೇರಿ ಮಾಧ್ಯಮದವರು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಹೇಳಿದರು.
ಸಿದ್ದು 5 ವರ್ಷ ಸಿಎಂ ಆಗಿರ್ತಾರೆ ಎಂಬ ಮಹದೇವಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮಲ್ಲಿ ಮುಖ್ಯಮಂತ್ರಿ ಆಗಲು ಅರ್ಹತೆ ಇರುವವರು 50 ಜನ ಇದ್ದಾರೆ. ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಮಾಡಲಿದೆ, ಈಗ ಸಿಎಂ ಸೀಟ್ ಖಾಲಿ ಇಲ್ಲ. ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಸಿದ್ದರಾಮಯ್ಯ, ಡಿಕೆಶಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ಗಂಭೀರವಾಗಿ ಕೆಲಸ ಮಾಡ್ತಿದ್ದಾರೆ. ನಾವುಗಳು ಮಾತನಾಡಿ ಪ್ರಯೋಜನ ಇಲ್ಲ ಎಂದರು.
ಆಣೆ ಪ್ರಮಾಣಕ್ಕೆ ಮಾಜಿ ಸಿಎಂ ಎಚ್ ಡಿಕೆ ಆಹ್ವಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರಿಗೆ ಮಾಡಲು ಕೆಲಸವಿಲ್ಲ. ವರ್ಗಾವಣೆಯಲ್ಲಿ ನೇರವಾಗಿ, ಪರೋಕ್ಷವಾಗಿ ನಾವಿಲ್ಲ ಎಂದು ಧರ್ಮಸ್ಥಳದಲ್ಲಿ ಆಣೆ ಮಾಡಲಿ. ಹಳೆಯದಲ್ಲೇ ಬೇಡ ಇವತ್ತಿನದು ಬೇಕು ಅಂತಾರೆ? ಆಯ್ತು ಹಳೆಯದು ಬೇಡ 2018ರ 14 ತಿಂಗಳು ಆಡಳಿತ ಬಗ್ಗೆಯೇ ಆಣೆ ಮಾಡಲಿ. ದೇವೇಗೌಡರ ಬಗ್ಗೆ ನಾನು ಮಾತನಾಡಲ್ಲ. ಕುಮಾರಸ್ವಾಮಿ ಆಣೆ ಪ್ರಮಾಣದ ವಿಚಾರ ಎತ್ತಿದ್ದಾರೆ. ಅವರು ಎಲ್ಲಿಗೆ ಬಂದು ಪ್ರಮಾಣ ಮಾಡ್ತಾರೆ ಅವರೇ ಹೇಳಲಿ ಎಂದರು.
ಆಪರೇಷನ್ ಕಮಲ, ಹಸ್ತ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಎರಡು ಪಕ್ಷದ ಶಾಸಕರಿಗೆ ಸಮಾಧಾನ ಇಲ್ಲ. ಹಾಗಾಗಿ ಆಪರೇಷನ್ ಕಮಲದ ವಿಚಾರ ತೆಗೆದು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಶಾಸಕರಿಗೆ 50ಕೋಟಿ ಆಫರ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರಿಗೆ ಆಫರ್ ಬಂದಿದ್ಯೋ ಗೊತ್ತಿಲ್ಲ. ಆ ವಿಚಾರ ಹೇಳಿದ ರವಿ ಪಕ್ಕದಲ್ಲೇ ಇದ್ದಾನೆ. ಅವನಿಗೆ ಏನಾದರೂ ದುಡ್ಡು ಬಂದಿದ್ದರೆ ನಮಗೂ ಕೊಡಲಿ ಎಂದು ನಗೆ ಚಟಾಕಿ ಹಾರಿಸಿದರು.
ಚಲುವರಾಯಸ್ವಾಮಿ ವಿರುದ್ಧ ಇಡಿ ದಾಳಿಗೆ ಷಡ್ಯಂತ್ರ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 2 ತಿಂಗಳ ಹಿಂದಯೇ ಇಡಿಗೆ ನನ್ನ ವಿರುದ್ಧ ಮೂಗರ್ಜಿಗಳು ಹೋಗಿರುವ ಮಾಹಿತಿ ಇದೆ. ಮೈತ್ರಿ ಆದವರ ಹೊಂದಾಣಿಕೆ ಚೆನ್ನಾಗಿರಲೇಬೇಕು ಅವರು ಏನು ಬೇಕಾದರೂ ಮಾಡಲಿ ಎಂದು ತಿಳಿಸಿದರು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…