ರಾಜ್ಯ

ನಮ್ಮಲ್ಲಿ ಸಿಎಂ ಆಗೊ ಅರ್ಹತೆ ಇರುವವರು 50 ಜನ‌ರಿದ್ದಾರೆ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ರಾಜಕೀಯ ಚರ್ಚೆ ಮಾಡಲ್ಲ, ಅಭಿವೃದ್ಧಿ ಬಗ್ಗೆ ಮಾತನಾಡ್ತೀನಿ. ಹೈಕಮಾಂಡ್ ಇದೆ, ಶಾಸಕಾಂಗ ಸಭೆ ಇದೆ ಅಲ್ಲಿ ತೀರ್ಮಾನ ಮಾಡ್ತಾರೆ ವಿರೋಧ ಪಕ್ಷದ ಜೊತೆ ಸೇರಿ ಮಾಧ್ಯಮದವರು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಹೇಳಿದರು.

ಸಿದ್ದು 5 ವರ್ಷ ಸಿಎಂ ಆಗಿರ್ತಾರೆ ಎಂಬ ಮಹದೇವಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮಲ್ಲಿ ಮುಖ್ಯಮಂತ್ರಿ ಆಗಲು ಅರ್ಹತೆ ಇರುವವರು 50 ಜನ‌ ಇದ್ದಾರೆ. ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಮಾಡಲಿದೆ, ಈಗ ಸಿಎಂ ಸೀಟ್ ಖಾಲಿ ಇಲ್ಲ. ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಸಿದ್ದರಾಮಯ್ಯ, ಡಿಕೆಶಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ಗಂಭೀರವಾಗಿ ಕೆಲಸ ಮಾಡ್ತಿದ್ದಾರೆ‌. ನಾವುಗಳು ಮಾತನಾಡಿ ಪ್ರಯೋಜನ ಇಲ್ಲ ಎಂದರು.

ಆಣೆ ಪ್ರಮಾಣಕ್ಕೆ ಮಾಜಿ ಸಿಎಂ ಎಚ್‌ ಡಿಕೆ ಆಹ್ವಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರಿಗೆ ಮಾಡಲು ಕೆಲಸವಿಲ್ಲ. ವರ್ಗಾವಣೆಯಲ್ಲಿ ನೇರವಾಗಿ, ಪರೋಕ್ಷವಾಗಿ ನಾವಿಲ್ಲ ಎಂದು ಧರ್ಮಸ್ಥಳದಲ್ಲಿ ಆಣೆ ಮಾಡಲಿ. ಹಳೆಯದಲ್ಲೇ ಬೇಡ ಇವತ್ತಿನದು ಬೇಕು ಅಂತಾರೆ? ಆಯ್ತು ಹಳೆಯದು ಬೇಡ 2018ರ 14 ತಿಂಗಳು ಆಡಳಿತ ಬಗ್ಗೆಯೇ ಆಣೆ ಮಾಡಲಿ. ದೇವೇಗೌಡರ ಬಗ್ಗೆ ನಾನು ಮಾತನಾಡಲ್ಲ. ಕುಮಾರಸ್ವಾಮಿ ಆಣೆ ಪ್ರಮಾಣದ ವಿಚಾರ ಎತ್ತಿದ್ದಾರೆ. ಅವರು ಎಲ್ಲಿಗೆ ಬಂದು ಪ್ರಮಾಣ ಮಾಡ್ತಾರೆ ಅವರೇ ಹೇಳಲಿ ಎಂದರು.

ಆಪರೇಷನ್ ಕಮಲ, ಹಸ್ತ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ‌‌. ಬಿಜೆಪಿ-ಜೆಡಿಎಸ್ ಮೈತ್ರಿ ಎರಡು ಪಕ್ಷದ ಶಾಸಕರಿಗೆ ಸಮಾಧಾನ ಇಲ್ಲ. ಹಾಗಾಗಿ ಆಪರೇಷನ್ ಕಮಲದ ವಿಚಾರ ತೆಗೆದು ಗೊಂದಲ ಸೃಷ್ಟಿಸುತ್ತಿದ್ದಾರೆ‌‌ ಎಂದು ಆರೋಪಿಸಿದರು.

ಕಾಂಗ್ರೆಸ್ ಶಾಸಕರಿಗೆ 50ಕೋಟಿ ಆಫರ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರಿಗೆ ಆಫರ್ ಬಂದಿದ್ಯೋ ಗೊತ್ತಿಲ್ಲ. ಆ ವಿಚಾರ ಹೇಳಿದ ರವಿ ಪಕ್ಕದಲ್ಲೇ ಇದ್ದಾನೆ. ಅವನಿಗೆ ಏನಾದರೂ ದುಡ್ಡು ಬಂದಿದ್ದರೆ ನಮಗೂ ಕೊಡಲಿ ಎಂದು ನಗೆ ಚಟಾಕಿ ಹಾರಿಸಿದರು.

ಚಲುವರಾಯಸ್ವಾಮಿ ವಿರುದ್ಧ ಇಡಿ ದಾಳಿಗೆ ಷಡ್ಯಂತ್ರ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 2 ತಿಂಗಳ ಹಿಂದಯೇ ಇಡಿಗೆ ನನ್ನ ವಿರುದ್ಧ ಮೂಗರ್ಜಿಗಳು ಹೋಗಿರುವ ಮಾಹಿತಿ ಇದೆ. ಮೈತ್ರಿ ಆದವರ ಹೊಂದಾಣಿಕೆ ಚೆನ್ನಾಗಿರಲೇಬೇಕು ಅವರು ಏನು ಬೇಕಾದರೂ ಮಾಡಲಿ ಎಂದು ತಿಳಿಸಿದರು.

lokesh

Recent Posts

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

7 mins ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

11 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

14 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

15 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

15 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

16 hours ago