ಬೆಂಗಳೂರು: ನಾವು ಜೆಡಿಎಸ್ ಶಾಸಕರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗಡಿಗೆ ಹೋಗಿ ಯಾವುದೇ ಪದಾರ್ಥದ ಬೆಲೆ ಎಷ್ಟು ಅಂತ ಕೇಳಿದಾಗ ಅವರು ಬೆಲೆ ಹೇಳುತ್ತಾರೆ. ಆದರೆ ಈ ರೀತಿ ನಾವೇನೂ ಜೆಡಿಎಸ್ನವರ ಬಳಿ ಹೋಗಿ ಕೇಳಲಿಲ್ಲ ಎಂದರು.
ಇನ್ನು ಸಿ.ಪಿ.ಯೋಗೇಶ್ವರ್ ಹೇಳಿಕೆಯಿಂದ ಜೆಡಿಎಸ್ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದಾರೆ. ಸಿಪಿವೈ ಹೇಳಿಕೆಯಿಂದ ಜೆಡಿಎಸ್ನವರು ಹೆದರುವ ಅವಶ್ಯಕತೆಯಿಲ್ಲ. ನಾವು ಅವರನ್ನು ಕೊಂಡುಕೊಳ್ಳಲು ಹೋಗಲ್ಲ. ಯೋಗೇಶ್ವರ್ ಹಾಗೆ ಸುಮ್ಮನೆ ಹೇಳಿಕೆ ನೀಡಿದ್ದಾರೆ ಅಷ್ಟೇ. ಆ ಹೇಳಿಕೆಯನ್ನೇ ಜೆಡಿಎಸ್ನವರು ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಲೇವಡಿ ಮಾಡಿದರು.
ಇನ್ನು ಸಂಪುಟ ಪುನರ್ರಚನೆ ಸಂಬಂಧ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಹೋಗಿದ್ದಾರೆ. ಖಾತೆ ಬದಲಾವಣೆ ಬಗ್ಗೆ ಏನು ತೀರ್ಮಾನ ಮಾಡುತ್ತಾರೋ ಆ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಏನು ಜವಾಬ್ದಾರಿ ಕೊಟ್ಟಿದ್ದಾರೋ ಅದನ್ನು ಮಾಡಿಕೊಂಡು ಬಂದಿದ್ದೇನೆ ಎಂದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…