ಬೆಂಗಳೂರು: ನಾವು ಜೆಡಿಎಸ್ ಶಾಸಕರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗಡಿಗೆ ಹೋಗಿ ಯಾವುದೇ ಪದಾರ್ಥದ ಬೆಲೆ ಎಷ್ಟು ಅಂತ ಕೇಳಿದಾಗ ಅವರು ಬೆಲೆ ಹೇಳುತ್ತಾರೆ. ಆದರೆ ಈ ರೀತಿ ನಾವೇನೂ ಜೆಡಿಎಸ್ನವರ ಬಳಿ ಹೋಗಿ ಕೇಳಲಿಲ್ಲ ಎಂದರು.
ಇನ್ನು ಸಿ.ಪಿ.ಯೋಗೇಶ್ವರ್ ಹೇಳಿಕೆಯಿಂದ ಜೆಡಿಎಸ್ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದಾರೆ. ಸಿಪಿವೈ ಹೇಳಿಕೆಯಿಂದ ಜೆಡಿಎಸ್ನವರು ಹೆದರುವ ಅವಶ್ಯಕತೆಯಿಲ್ಲ. ನಾವು ಅವರನ್ನು ಕೊಂಡುಕೊಳ್ಳಲು ಹೋಗಲ್ಲ. ಯೋಗೇಶ್ವರ್ ಹಾಗೆ ಸುಮ್ಮನೆ ಹೇಳಿಕೆ ನೀಡಿದ್ದಾರೆ ಅಷ್ಟೇ. ಆ ಹೇಳಿಕೆಯನ್ನೇ ಜೆಡಿಎಸ್ನವರು ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಲೇವಡಿ ಮಾಡಿದರು.
ಇನ್ನು ಸಂಪುಟ ಪುನರ್ರಚನೆ ಸಂಬಂಧ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಹೋಗಿದ್ದಾರೆ. ಖಾತೆ ಬದಲಾವಣೆ ಬಗ್ಗೆ ಏನು ತೀರ್ಮಾನ ಮಾಡುತ್ತಾರೋ ಆ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಏನು ಜವಾಬ್ದಾರಿ ಕೊಟ್ಟಿದ್ದಾರೋ ಅದನ್ನು ಮಾಡಿಕೊಂಡು ಬಂದಿದ್ದೇನೆ ಎಂದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…